Thursday, October 3, 2024
Thursday, October 3, 2024

ಆದರ್ಶವಾಗಿರಲು ದೈವ ಭಕ್ತಿ ಗುರು ಭಕ್ತಿ ಆತ್ಮವಿಶ್ವಾಸ ಇರಬೇಕು-ಬೊಮ್ಮಾಯಿ

Date:

ಪೂಜ್ಯರು ಕೇವಲ ಮಠವನ್ನು ಮಾತ್ರ ಕಟ್ಟದೆ ನಾವೆಲ್ಲರೂ ಒಂದೇ ಎಂಬ ಭಾವನೆಯಲ್ಲಿ ಜನರ ಮನಸ್ಸನ್ನು ಕಟ್ಟುತ್ತಿದ್ದಾರೆ. ನಾನು ಸಿಎಂ ಆಗಿ ಬಂದಿಲ್ಲ. ಭಕ್ತನಾಗಿ ಬಂದಿದ್ದೇನೆ. ಶೃಂಗೇರಿ ಶಾರದಾಂಬೆ ಹಾಗೂ ಹರಿಹರಪುರ ಮಠದ ಶಾರದಾ ಲಕ್ಷ್ಮಿ ನರಸಿಂಹ ಸ್ವಾಮಿ ದೇವರಿಂದ ರಾಜ್ಯವನ್ನು ಮುನ್ನಡೆಸುವ ಹೊಸ ಪ್ರೇರಣೆ ಪಡೆದುಕೊಂಡು ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶೃಂಗೇರಿ ಶಾರದಾಂಬೆ ಹಾಗೂ ಕೊಪ್ಪ ತಾಲೂಕಿನ ಐತಿಹಾಸಿಕ ಹರಿಹರಪುರ ಮಠಕ್ಕೆ ಭೇಟಿ ನೀಡಿದ ಸಿಎಂ, ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಅಪ್ಪ-ಅಮ್ಮ, ಅಕ್ಕ-ತಂಗಿ, ಅಣ್ಣ-ತಮ್ಮ, ಗುರು ಎಲ್ಲರ ಸಹಾಯದಲ್ಲಿ ಬೆಳೆಯುತ್ತಿದ್ದೇವೆ. ಇದು ನಮ್ಮ ಅಕೌಂಟ್‌ನಲ್ಲಿ ಕ್ರೆಡಿಟ್ ಆಗಿರುತ್ತದೆ ಎಂದರು.

ಸಮಾಜ ಆದರ್ಶವಾಗಿ ಇರಬೇಕಾದರೆ ದೈವ ಭಕ್ತಿ, ಗುರುಭಕ್ತಿ ಹಾಗೂ ಆತ್ಮವಿಶ್ವಾಸ ಇರಬೇಕು. ಅದು ಬಹಳ ಮುಖ್ಯ. ಉತ್ಕ್ರಷ್ಟವಾದ ಪ್ರೀತಿಯೇ ಭಕ್ತಿ ಹಾಗೂ ಪವಿತ್ರ. ನಾವು ದೇವರ ಬಳಿ ಅಂತಸ್ತು, ಐಶ್ವರ್ಯ ಕೇಳುತ್ತೇವೆ ಎಂದು ತಿಳಿಸಿದರು.

ಸ್ವಾಮೀಜಿಗಳು ಲೋಕಕ್ಕಾಗಿ ಕೇಳಿ ಕೊಳ್ಳುತ್ತಾರೆ. ನಿಸ್ವಾರ್ಥ ಭಕ್ತಿಯ ಪ್ರಪಂಚದಲ್ಲಿ ನೀವು ಇದ್ದೀರಿ.ಭಗವಂತನಿಗೆ ಯಾರಿಗೆ, ಯಾವಾಗ, ಏನು ಕೊಡಬೇಕು ಎಂಬುದು ಗೊತ್ತಿದೆ. ಭಗವಂತ ಜನ್ಮ ನೀಡಿದ್ದಾನೆ. ನಾವು ಏಕೆ ಹುಟ್ಟಿದ್ದೇವೆ ಎಂಬುದಕ್ಕೆ ಉತ್ತರ ನಮ್ಮೊಳಗೆ ಇದೆ. ನಾವು ಅದನ್ನು ತಿಳಿದುಕೊಂಡರೆ ಜೀವನ ಸಾರ್ಥಕ. ಗುರುವಿನ ಬಳಿ ಭಕ್ತಿಯಲ್ಲಿ ಕರಗಿ ಲೀನವಾಗಬೇಕು.

ನಾನು ಎಂಬ ಅಸ್ತಿತ್ವವನ್ನು ವಿಸರ್ಜನೆ ಮಾಡಬೇಕು. ನಾನು ಎಂಬುದು ನಿಸರ್ಗದ ಸಣ್ಣ ಕಣ. ಯಾರೂ ಕೂಡ ಸರ್ವ ಸ್ವತಂತ್ರರಾಗಿ ಹುಟ್ಟಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...