Wednesday, December 17, 2025
Wednesday, December 17, 2025

ಹುಬ್ಬಳ್ಳಿ ಗಲಭೆ ಕಾಂಗ್ರೆಸ್ ಕೈವಾಡವಿದ್ದರೆ ವಿಚಾರಣೆ ನಡೆಸಲಿ

Date:

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆಪಾದಿಸುತ್ತಿದ್ದಾರೆ. ಅವರದ್ದೇ ಸರ್ಕಾರವಿದ್ದು, ಕ್ರಮಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಹುಬ್ಬಳ್ಳಿ ಗಲಭೆಯಲ್ಲಿ ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ಕಾಂಗ್ರೆಸ್‌ ಮಧ್ಯ ಪ್ರವೇಶ ಮಾಡುವುದಿಲ್ಲ. ಆದರೆ, ಅಮಾಯಕರ ವಿರುದ್ಧ ಕ್ರಮ ಆಗಬಾರದು. ಪೊಲೀಸರು ಹೆಚ್ಚಿನ ಅನಾಹುತ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಪೊಲೀಸ್‌ಗಿರಿ ವಿಚಾರದಲ್ಲಿ ಅವರು ಕಠಿಣ ಪದ ಪ್ರಯೋಗ ಮಾಡಿದ್ದರೆ, ಪೊಲೀಸರಿಗೆ ಹೆಚ್ಚಿನ ಶಕ್ತಿ ಬರುತ್ತಿತ್ತು ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಿರತರನ್ನು ಸಮಾಧಾನಗೊಳಿಸಲು ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಯತ್ನಿಸಿದ್ದಾರೆ.
ಈಗ ಅವರನ್ನೇ ಆರೋಪಿಯನ್ನಾಗಿಸಲಾಗುತ್ತಿದೆ. ತಪ್ಪು ಮಾಡಿದ್ದರೆ ಬಂಧಿಸಲಿ ಎಂದರು.

ಮಾಧ್ಯಮದಲ್ಲಿ ಬರುತ್ತಿರುವುದಕ್ಕೂ, ವಾಸ್ತವಕ್ಕೂ ದೂರ ಇದೆ. ಮಾಧ್ಯಮದವರನ್ನು ಹುಬ್ಬಳ್ಳಿಯನ್ನು ಕೊಲ್ಲುತ್ತಿದ್ದೀರಾ ಎಂದು ಪ್ರಶ್ನಿಸಿದರು.

ಕಾನೂನು ಕೈಗೆತ್ತಿಕೊಳ್ಳುವುದನ್ನು ಖಂಡಿಸುತ್ತೇನೆ. ರಾಜ್ಯ ಶಾಂತಿಯ ತೋಟ ಆಗಬೇಕು. ಯಾವುದೇ ಧರ್ಮದವರು ಅಶಾಂತಿ, ಪ್ರಚೋದನೆಗೆ ಅವಕಾಶ ಕೊಡಬಾರದು ಎಂದರು.

ಹುಬ್ಬಳ್ಳಿ ವಾಣಿಜ್ಯ ನಗರವಾಗಿದೆ. ವ್ಯಾಪಾರ ನಡೆಯುವಂತಾಗಬೇಕು. ಕಾನೂನು ಕೈಗೆತ್ತಿಕೊಳ್ಳಬೇಡಿ. ಸರ್ಕಾರ, ಪೊಲೀಸರಿಗೆ ಬಿಡಿ. ಸಮಸ್ಯೆ ಇದ್ದರೆ ಹೇಳಿ, ಕಾಂಗ್ರೆಸ್‌ ಹೋರಾಟ ಮಾಡಲಿದೆ. ದೇಶದೆಲ್ಲೆಡೆ ಕೋಮುಗಲಭೆ ಹುಟ್ಟುಹಾಕುವ ವ್ಯವಸ್ಥಿತ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ದೇಶ ಉಳಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...