Thursday, February 5, 2026
Thursday, February 5, 2026

ಬ್ರಹ್ಮೋಸ್ ಕ್ಷಿಪಣಿ ಡಬಲ್ ಹಿಟ್ ಯಶಸ್ವಿ ಪರೀಕ್ಷಾರ್ಥ ಪ್ರಯೋಗ

Date:

ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

ಇದರಿಂದಾಗಿ ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ.

ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ ವಿಮಾನದ ಮೂಲಕ ನಿಖರ ಗುರಿ ತಲುಪುವ ಪರೀಕ್ಷೆ ಮಾಡಿತ್ತು.

ಈ ವೇಳೆ ಮೊದಲು ನೌಕಾ ಮಾರ್ಗವಾಗಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು.

ಭಾರತೀಯ ವಾಯುಪಡೆ ಯುದ್ಧ ನೌಕೆ ಮತ್ತು ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ.

ಎರಡೂ ಪರೀಕ್ಷೆಯಲ್ಲಿ ಒಂದೇ ಗುರಿ ನಿಗದಿ ಪಡಿಸಲಾಗಿತ್ತು.
ಎರಡೂ ಮಾರ್ಗದಲ್ಲಿ ಒಂದೇ ಗುರಿಯನ್ನು ಧ್ವಂಸ ಮಾಡುವಲ್ಲಿ ಕ್ಷಿಪಣಿ ಯಶಸ್ವಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಸೇನೆ ಮತ್ತು ನೌಕಾದಳದ ಅಧಿಕಾರಿಗಳು, ಕ್ಷಿಪಣಿಯು ಪ್ರತೀ ಗಂಟೆಗೆ 3000 ಕಿ.ಮೀ ವೇಗದಲ್ಲಿ ಗುರಿಯನ್ನು ನಿಖರವಾಗಿ ಧ್ವಂಸ ಮಾಡಿದೆ. ಕ್ಷಿಪಣಿಯ ಈ ವೇಗವು ಶತ್ರುರಾಷ್ಟ್ರಗಳ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಪ್ಪಿಸಿಕೊಂಡು ಗುರಿಯನ್ನು ತಲುಪಲು ನೆರವಾಗುತ್ತದೆ. ಈ ವೇಗದಲ್ಲಿ ಕ್ಷಿಪಣಿಯನ್ನು ಗುರುತಿಸುವುದೂ ಕೂಡ ಕಷ್ಟಕರವಾಗುತ್ತದೆ ಎಂದು ಹೇಳಿದ್ದಾರೆ.

ಐಎನ್‌ಎಸ್ ಡೆಲ್ಲಿ ಯುದ್ಧನೌಕೆ ಮೂಲಕ ಕ್ಷಿಪಣಿ ಪ್ರಯೋಗ ಮಾಡಲಾಗಿದೆ. ಈ ವೇಳೆ ಕ್ಷಿಪಣಿಗೆ ಗುರಿಯಾಗಿ ಮತ್ತೊಂದು ನೌಕೆಯನ್ನು ನೀಡಲಾಗಿತ್ತು. ಮೊದಲ ಪರೀಕ್ಷೆಯಲ್ಲಿ ನೌಕೆಯನ್ನು ಹೊಡೆದುರುಳಿಸುವಲ್ಲಿ ಕ್ಷಿಪಣಿ ಯಶಸ್ವಿಯಾಗಿತ್ತು.

ಬಳಿಕ ಭಾರತೀಯ ವಾಯುಪಡೆಯ Su-30MKI ಯುದ್ಧ ವಿಮಾನದ ಮೂಲಕ ವಾಯುನೆಲೆಯಿಂದ ಹೊರಟು ಅದೇ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ವೇಳೆಯೂ ಬ್ರಹ್ಮೋಸ್ ಕ್ಷಿಪಣಿ ಹಡಗನ್ನು ಯಶಸ್ವಿಯಾಗಿ ಹೊಡೆದರುಳಿಸಿತ್ತು.

ಇನ್ನು ಸಿಡಿತಲೆಯೊಂದಿಗೆ ಕ್ಷಿಪಣಿ ಸತತ ಎರಡು ಬಾರಿ ಹೊಡೆದ ಪರಿಣಾಮ ಹಡಗು ಭಾರಿ ಹಾನಿಗೀಡಾಗಿ ಸಮುದ್ರದಲ್ಲೇ ಮುಳುಗಿತು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...