Sunday, December 14, 2025
Sunday, December 14, 2025

ಬ್ರಹ್ಮೋಸ್ ಕ್ಷಿಪಣಿ ಡಬಲ್ ಹಿಟ್ ಯಶಸ್ವಿ ಪರೀಕ್ಷಾರ್ಥ ಪ್ರಯೋಗ

Date:

ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

ಇದರಿಂದಾಗಿ ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ.

ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ ವಿಮಾನದ ಮೂಲಕ ನಿಖರ ಗುರಿ ತಲುಪುವ ಪರೀಕ್ಷೆ ಮಾಡಿತ್ತು.

ಈ ವೇಳೆ ಮೊದಲು ನೌಕಾ ಮಾರ್ಗವಾಗಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು.

ಭಾರತೀಯ ವಾಯುಪಡೆ ಯುದ್ಧ ನೌಕೆ ಮತ್ತು ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ.

ಎರಡೂ ಪರೀಕ್ಷೆಯಲ್ಲಿ ಒಂದೇ ಗುರಿ ನಿಗದಿ ಪಡಿಸಲಾಗಿತ್ತು.
ಎರಡೂ ಮಾರ್ಗದಲ್ಲಿ ಒಂದೇ ಗುರಿಯನ್ನು ಧ್ವಂಸ ಮಾಡುವಲ್ಲಿ ಕ್ಷಿಪಣಿ ಯಶಸ್ವಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಸೇನೆ ಮತ್ತು ನೌಕಾದಳದ ಅಧಿಕಾರಿಗಳು, ಕ್ಷಿಪಣಿಯು ಪ್ರತೀ ಗಂಟೆಗೆ 3000 ಕಿ.ಮೀ ವೇಗದಲ್ಲಿ ಗುರಿಯನ್ನು ನಿಖರವಾಗಿ ಧ್ವಂಸ ಮಾಡಿದೆ. ಕ್ಷಿಪಣಿಯ ಈ ವೇಗವು ಶತ್ರುರಾಷ್ಟ್ರಗಳ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಪ್ಪಿಸಿಕೊಂಡು ಗುರಿಯನ್ನು ತಲುಪಲು ನೆರವಾಗುತ್ತದೆ. ಈ ವೇಗದಲ್ಲಿ ಕ್ಷಿಪಣಿಯನ್ನು ಗುರುತಿಸುವುದೂ ಕೂಡ ಕಷ್ಟಕರವಾಗುತ್ತದೆ ಎಂದು ಹೇಳಿದ್ದಾರೆ.

ಐಎನ್‌ಎಸ್ ಡೆಲ್ಲಿ ಯುದ್ಧನೌಕೆ ಮೂಲಕ ಕ್ಷಿಪಣಿ ಪ್ರಯೋಗ ಮಾಡಲಾಗಿದೆ. ಈ ವೇಳೆ ಕ್ಷಿಪಣಿಗೆ ಗುರಿಯಾಗಿ ಮತ್ತೊಂದು ನೌಕೆಯನ್ನು ನೀಡಲಾಗಿತ್ತು. ಮೊದಲ ಪರೀಕ್ಷೆಯಲ್ಲಿ ನೌಕೆಯನ್ನು ಹೊಡೆದುರುಳಿಸುವಲ್ಲಿ ಕ್ಷಿಪಣಿ ಯಶಸ್ವಿಯಾಗಿತ್ತು.

ಬಳಿಕ ಭಾರತೀಯ ವಾಯುಪಡೆಯ Su-30MKI ಯುದ್ಧ ವಿಮಾನದ ಮೂಲಕ ವಾಯುನೆಲೆಯಿಂದ ಹೊರಟು ಅದೇ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ವೇಳೆಯೂ ಬ್ರಹ್ಮೋಸ್ ಕ್ಷಿಪಣಿ ಹಡಗನ್ನು ಯಶಸ್ವಿಯಾಗಿ ಹೊಡೆದರುಳಿಸಿತ್ತು.

ಇನ್ನು ಸಿಡಿತಲೆಯೊಂದಿಗೆ ಕ್ಷಿಪಣಿ ಸತತ ಎರಡು ಬಾರಿ ಹೊಡೆದ ಪರಿಣಾಮ ಹಡಗು ಭಾರಿ ಹಾನಿಗೀಡಾಗಿ ಸಮುದ್ರದಲ್ಲೇ ಮುಳುಗಿತು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...