ದೇಶದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮಧ್ಯೆ ದ್ವೇಷದ ಭಾವನೆ ಬಿತ್ತಲಾಗುತ್ತಿರುವುದು ಈಗ ಎಲ್ಲೆಡೆ ಕಂಡು ಬರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಈ ಘಟನೆಯು ಮಾನವೀಯತೆಯ ಮೇಲಿನ ನಮ್ಮ ನಂಬಿಕೆಯನ್ನು ಮತ್ತೊಮ್ಮೆ ಸ್ಥಾಪಿಸುತ್ತಿದೆ.
ಉತ್ತರ ಪ್ರದೇಶದ ಈ ಜೈಲಿನಲ್ಲಿ ಖೈದಿಗಳು ಕೋಮು ಸೌಹಾರ್ದತೆ ಮೆರೆದಿದ್ದಾರೆ.
ಬಾರಾಬಂಕಿ ಜೈಲಿನಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂಗಳು ಮತ್ತು ಮುಸ್ಲಿಂ ಖೈದಿಗಳು ಒಟ್ಟಾಗಿ ಉಪವಾಸ ಮುರಿಯುತ್ತಿರುವ ವಿಡಿಯೋ ವೈರಲ್ ಆಗಿದೆ.
ಜೈಲು ಆಡಳಿತ ಸಿಬ್ಬಂದಿಯೇ ಇಫ್ತಾರ್ ಕೂಟ ಆಯೋಜಿಸಿದ್ದರು. ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿವಿಧ ಧರ್ಮಗಳ ನಡುವಿನ ಈ ಸಾಮರಸ್ಯವನ್ನು ಕಂಡು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಏಕತೆಯ ಶಕ್ತಿ ಅಂತೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕಾಲದಲ್ಲಿ ಹೊರಗಿಗಿಂತ ಜೈಲಿನಲ್ಲಿ ಹೆಚ್ಚು ಮಾನವೀಯತೆ ಉಳಿದಿದೆ ಎಂದು ತೋರುತ್ತದೆ ಅಂತೆಲ್ಲಾ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.