Sunday, May 17, 2026
Sunday, May 17, 2026

ಬಯಲಲ್ಲಿ ಮಾತ್ರ ಭೇದ ಜೈಲಲ್ಲಿ ನಾವೆಲ್ಲ ಒಂದೇ

Date:

ದೇಶದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮಧ್ಯೆ ದ್ವೇಷದ ಭಾವನೆ ಬಿತ್ತಲಾಗುತ್ತಿರುವುದು ಈಗ ಎಲ್ಲೆಡೆ ಕಂಡು ಬರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಈ ಘಟನೆಯು ಮಾನವೀಯತೆಯ ಮೇಲಿನ ನಮ್ಮ ನಂಬಿಕೆಯನ್ನು ಮತ್ತೊಮ್ಮೆ ಸ್ಥಾಪಿಸುತ್ತಿದೆ.

ಉತ್ತರ ಪ್ರದೇಶದ ಈ ಜೈಲಿನಲ್ಲಿ ಖೈದಿಗಳು ಕೋಮು ಸೌಹಾರ್ದತೆ ಮೆರೆದಿದ್ದಾರೆ.
ಬಾರಾಬಂಕಿ ಜೈಲಿನಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂಗಳು ಮತ್ತು ಮುಸ್ಲಿಂ ಖೈದಿಗಳು ಒಟ್ಟಾಗಿ ಉಪವಾಸ ಮುರಿಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಜೈಲು ಆಡಳಿತ ಸಿಬ್ಬಂದಿಯೇ ಇಫ್ತಾರ್ ಕೂಟ ಆಯೋಜಿಸಿದ್ದರು. ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿವಿಧ ಧರ್ಮಗಳ ನಡುವಿನ ಈ ಸಾಮರಸ್ಯವನ್ನು ಕಂಡು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಏಕತೆಯ ಶಕ್ತಿ ಅಂತೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕಾಲದಲ್ಲಿ ಹೊರಗಿಗಿಂತ ಜೈಲಿನಲ್ಲಿ ಹೆಚ್ಚು ಮಾನವೀಯತೆ ಉಳಿದಿದೆ ಎಂದು ತೋರುತ್ತದೆ ಅಂತೆಲ್ಲಾ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...