Monday, August 24, 2026
Monday, August 24, 2026

ಸಿಡಿಲು ಮಳೆಗೆ ಸಿಲುಕಿದರೆ… ಮಂಜಾಗ್ರತಾ ಕ್ರಮಗಳು

Date:

ಮಳೆ ಬರುವ ಮುನ್ನ ಮಿಂಚು, ಗುಡುಗು ಬರುವುದು ಸಾಮಾನ್ಯ. ಮೊದಲು ಬೆಳಕು ಬಂದು ಅಂತರ ಜೋರಾಗಿ ಶಬ್ದ ಬರುತ್ತೆ. ಇದನ್ನು ಕೇಳೋಕೆ ಭಯವಾಗುವ ಜೊತೆಗೆ, ಸಿಡಿಲಿನಿಂದ ಅನೇಕರ ಪ್ರಾಣ ಪಕ್ಷಿ ಕೂಡ ಹಾರಿಹೋಗುವ ಅದೆಷ್ಟೋ ಘಟನೆ ಗಳನ್ನು ನಾವು ಕೇಳಿರುತ್ತೇವೆ. ಸಿಡಿಲು ಬಂದಾಗ ಏನು ಮಾಡಬೇಕು? ಎಂಬುದು ನಮಗೆ ತಿಳಿದಿದ್ದರೆ, ಇಂತಹ ಅಪಾಯಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಹಾಗಾದ್ರೆ ಆ ಉಪಾಯಗಳಾವುವು ತಿಳಿದುಕೊಳ್ಳೋಣ.

ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ. ಅದರಿಂದಾಗುವ ಸಾವು ನೋವು ಗಳನ್ನು ತಪ್ಪಿಸಬಹುದು.

  • ಗುಡುಗು-ಮಿಂಚು ಬರುತ್ತಿದೆ ಎಂದು ತಿಳಿದ ಕೂಡಲೇ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ. ಆದರೆ ನಿಲ್ಲ ಬೇಡಿ.

-ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ. ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.

ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.)

  • ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ
  • ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.)

-ಕೆರೆಯಲ್ಲಿ ಈಜುವುದು,ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ .

  • ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.

-ತಂತಿಬೇಲಿ,ಭಟ್ಟ ಒಣಹಾಕುವ ತಂತಿ, ಇವುಗಳಿಂದ ದೊರವಿರಿ

  • ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.
  • ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.
  • ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.
  • ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.
  • ಕಂಪ್ಯೂಟರ್ ಗಳಿಂದ ದೂರ ಇರಿ
  • ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪೆರ್ಶಿಸದೆ.ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ. ಈ ಎಲ್ಲಾ ಸುಲಭ ಉಪಾಯದಿಂದ ನಾವು ಸಿಡಿಲಿನಿಂದ ತಪ್ಪಿಸಿಕೊಳ್ಳಬಹುದಾಗಿತ್ತು. ಸಿಡಿಲು ಬಂದಾಗ ನೀವು ಜಾಗೃತರಾಗಿ. ನಿಮ್ಮವರನ್ನು ಜಾಗೃತಗೊಳಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...