Thursday, May 21, 2026
Thursday, May 21, 2026

ಆರೋಗ್ಯ ಇಲಾಖೆಯಲ್ಲಿ ಹಾಜರಾತಿ ಆಧರಿಸಿದ ವೇತನ ವ್ಯವಸ್ಥೆ

Date:

ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಹೇಳಿದ್ದಾರೆ.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ‘ಆಧಾರ್‌ ‘ ಆಧರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ ( ಸ್ಯಾಲರಿ ಡ್ರಾಯಿಂಗ್‌ ಆಫೀಸರ್‌)ಗಳು ಪ್ರತೀ ತಿಂಗಳು ಎಇಬಿಎಎಸ್‌ ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‌ಒ) ಸಲ್ಲಿಸಬೇಕು.

ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‌ಒ ಅವರು ಕೈಗೊಂಡ ಕ್ರಮಗಳನ್ನ ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು

ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನುಕಡಿತಗೊಳಿಸಲಾಗುವುದು ಎಂದರು.

ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‌ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...