Thursday, February 5, 2026
Thursday, February 5, 2026

ಹೆಣ್ಣುಮಕ್ಕಳಿಗೆ ಶಿಕ್ಷಣ ಆಗ್ರಹಿಸಿ ಬ್ರಿಟನ್ ಭಾರತ ಜಂಟಿ ಹೇಳಿಕೆ

Date:

ಅಫ್ಘಾನಿಸ್ತಾನದಲ್ಲಿನ ಈಗಿನ ಪರಿಸ್ಥಿತಿ ಹಾಗೂ ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಬ್ರಿಟನ್ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಹೆಣ್ಣುಮಕ್ಕಳಿಗೆ ಶಿಕ್ಷಣಕ್ಕೆ ಅವಕಾಶ ನೀಡಬೇಕೆಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಜಂಟಿಯಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ತಾಲಿಬಾನ್ ಸರ್ಕಾರ ಅಲ್ಲಿನ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಫ್ಘಾನಿಸ್ತಾನದ ಜನರಿಗೆ ವೈದ್ಯಕೀಯ ಮತ್ತು ಆಹಾರ ಧಾನ್ಯಗಳ ನೆರವು ನೀಡುವಲ್ಲಿ ಭಾರತ ವಹಿಸಿದ ಪಾತ್ರವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಶ್ಲಾಘಿಸಿದ್ದಾರೆ.

ಇದರ ಜೊತೆಗೆ ಆಫ್ಘನ್ ಪ್ರದೇಶವನ್ನು ಭಯೋತ್ಪಾದಕ ಕೃತ್ಯಗಳಿಗೆ ಆಶ್ರಯತಾಣವಾಗಿ ಬಳಸಲು ಮತ್ತು ಉಗ್ರ ಕೃತ್ಯಗಳಿಗೆ ಹಣಕಾಸು ಒದಗಿಸಲು ಬಳಸದಂತೆ ಎರಡು ರಾಷ್ಟ್ರಗಳು ಒತ್ತಾಯಿಸಿವೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಉಭಯ ರಾಷ್ಟ್ರಗಳು ಅಫ್ಘಾನಿಸ್ತಾನದ ಜನರಿಗೆ ತಕ್ಷಣದ ಮಾನವೀಯ ನೆರವು ನೀಡುವುದನ್ನು ಮುಂದುವರಿಸಲು ಒಪ್ಪಿಕೊಂಡಿದೆ. ಶಾಂತಿಯುತ, ಸುರಕ್ಷಿತ ಅಫ್ಘಾನಿಸ್ತಾನವನ್ನು ಬೆಂಬಲಿಸಲು ಮತ್ತು ಮುಕ್ತ ಹಾಗೂ ಸುರಕ್ಷಿತ ಇಂಡೋ ಪೆಸಿಫಿಕ್‌ಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು.

ಭಾರತ,ಯುಕೆ ರಕ್ಷಣಾ ಮತ್ತು ಅಂತರಾಷ್ಟ್ರೀಯ ಭದ್ರತಾ ಪಾಲುದಾರಿಕೆ ಚೌಕಟ್ಟಿನ ಅಡಿಯಲ್ಲಿ ಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವುದು, ಹಾಗೂ ವಿಶ್ವಾಸಾರ್ಹ ಪಾಲುದಾರರಾಗಿ ಸಹಕಾರವನ್ನು ತೀವ್ರಗೊಳಿಸುವುದು ಸೇರಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...