Monday, August 24, 2026
Monday, August 24, 2026

ಖರ್ಗೆ ಅವರು ಬಿಡುಗಡೆ ಮಾಡಿರುವ ವಿಡಿಯೋ ತನಿಖೆ ಮಾಡಿಸುತ್ತೇವೆ-ಸಿಎಂ

Date:

ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲವೂ ತನಿಖೆ ಆಗುತ್ತದೆ. ನಾನು ಆ ಆಡಿಯೋ ನೋಡಿಲ್ಲ.ಆಡಿಯೋ ಇಬ್ಬರ ಮದ್ಯೆ ಮಾತುಕತೆ ಆಗಿದೆ. ಆ ಇಬ್ಬರು ಯಾರು? ಅವರ ಅರ್ಹತೆ, ಕ್ರೆಡಿಬಿಲಿಟಿ ಏನು? ಎಲ್ಲವೂ ತನಿಖೆ ಆಗುತ್ತದೆ. ಆಡಿಯೋ ಕೂಡ ತನಿಖೆಗೆ ಒಳಪಡಿಸುತ್ತೇವೆ. ಯಾರೇ ತಪ್ಪಿತಸ್ಥರು ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಿಜೆ ಹಾಗೂ ಸಿಎಂ ಕಾನ್ಫರೆನ್ಸ್ ಇದೆ. ಆದ್ದರಿಂದ, ದೆಹಲಿಗೆ ಹೋಗುತ್ತೇನೆ. ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿರುವ ಪ್ರಕರಣ ನನಗೆ ಗೊತ್ತಿಲ್ಲ. ನಾನು ಕಮಿಷನರ್ ಜೊತೆಗೆ ಮಾತನಾಡುತ್ತೇನೆ. ಶಾಂತಿ ಕದಡಲು ಆಗಾಗ ಇಂಥ ಪ್ರಯತ್ನ ಆಗುತ್ತಿದೆ. ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತನಿಖೆ ಮಾಡುತ್ತೇವೆ. ಇಮೇಲ್ ಟ್ರ್ಯಾಕ್ ಮಾಡಿ ತನಿಖೆ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...