ದೇಶದಲ್ಲಿ ಕೊರೋನಾ ನಾಲ್ಕನೇ ಅಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27ರಂದು, ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ತಿಳಿಸಿದೆ.
ಕೊರೋನಾ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ವಿಷಯವನ್ನು ಪ್ರಸ್ತುತ ಪಡಿಸಲಿದ್ದಾರೆ. ದೇಶದಾದ್ಯಂತ ಹೊಸದಾಗಿ 15,079 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿದೆ.