Friday, February 6, 2026
Friday, February 6, 2026

ಬಡಮಕ್ಕಳಿಗೆ ಉದ್ಯೋಗ ನೀಡಿಕೆ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ-ಕುಮಾರ ಸ್ಬಾಮಿ

Date:

ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಬೀದರ್‌ನಲ್ಲಿ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಷ್ಟೇ ಅಲ್ಲ. ಸಹಕಾರಿ ಕ್ಷೇತ್ರದಲ್ಲಿಯೂ ಸರ್ಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆ 25ರಿಂದ 50 ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಇದುವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು. ಮತ್ತು ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...