Saturday, May 16, 2026
Saturday, May 16, 2026

ಹೆಣ್ಣುಮಕ್ಕಳಿಗೆ ಈಗ ಶಿಕ್ಷಣ ಮುಖ್ಯ- ಶೋಭಾ ಕರಂದ್ಲಾಜೆ

Date:

ನಮ್ಮ ಹೆಣ್ಣು ಮಕ್ಕಳಿಗೆ ಬೇಕಾದದ್ದು ಶಿಕ್ಷಣ. ಅವರು ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ಅವರು ನಿಲ್ಲಬೇಕು. ಹಾಲ್ ಟಿಕೆಟ್‌ ಪಡೆದು ಪರೀಕ್ಷೆ ಬರೆಯದೆ ಪ್ರಚಾರ ಗಿಟ್ಟಿಸುತ್ತಿದ್ದಾರೆ. ಭಯೋತ್ಪಾದಕರು ಬೆಂಬಲ ಕೊಡುವ ರೀತಿಯಲ್ಲಿ ಭಾರತದಲ್ಲಿ ಏನೋ ನಡೆಯುತ್ತದೆ ಎನ್ನುವಂತೆ ಬಿಂಬಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಇದು ಭಾರತದಲ್ಲಿ ನಡೆಯುವುದಿಲ್ಲ. ಇಲ್ಲಿ ಪ್ರಜಾತಂತ್ರ ವ್ಯವಸ್ಥೆ ಇದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ನಿನ್ನೆ (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಪರೀಕ್ಷೆ ಬರೆಯಬೇಕು. ಪದವಿ ಪಡೆದು ಅವರ ಕಾಲ ಮೇಲೆ ಅವರು ನಿಲ್ಲಬೇಕು. ಈಗಲಾದರೂ ಸರಿ ಮಾಡಿಕೊಂಡು ಹೋಗಬೇಕು. ನಿಮ್ಮ ಹಿಂದೆ ನಿಂತ ಸಂಘಟನೆ, ಬದುಕಿನಲ್ಲಿ ಬರುವುದಿಲ್ಲ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಹಿಜಾಬ್‌ ಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ಪಷ್ಟ ನಿರ್ಧಾರ ತಿಳಿಸಿದೆ. ಸಮವಸ್ತ್ರ ಧರಿಸಿ ಬರಬೇಕೆಂದು ಹೇಳಿರುವುದರಿಂದ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಕೂಡ ಇದನ್ನೇ ಹೇಳಿದೆ. ಹೈಕೋರ್ಟ್‌ ಆದೇಶ ಮೀರಿ ಕೆಲವರು ಹಿಜಾಬ್‌ಗೆ ಬೆಂಬಲ ಕೊಡುತ್ತಿದ್ದಾರೆ. ಈ ದೇಶದ ನೆಲದ ಕಾನೂನನ್ನು ಪಾಲನೆ ಮಾಡುವುದಿಲ್ಲ. ಮನಬಂದಂತೆ ನಡೆದುಕೊಳ್ಳುತ್ತೇವೆ ಎಂಬುವುದು ಸಾಬೀತು ಮಾಡಿದ್ದಾರೆ. ಪೊಲೀಸರಿಗೆ, ಸರ್ಕಾರಕ್ಕೆ ಗೌರವ ಕೊಡುವುದಿಲ್ಲ. ಪೊಲೀಸ್‌ ವ್ಯವಸ್ಥೆ ಮೇಲೆ ದೌರ್ಜನ್ಯ, ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡುತ್ತಾರೆ. ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ದೇಶದಲ್ಲಿ ಎಲ್ಲರೂ ಒಟ್ಟಾಗಿ ಬದುಕಬೇಕು ಅನ್ನೋದು ನಮ್ಮ ಸಂಕಲ್ಪ ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಭಾರತ ಎತ್ತ ಸಾಗುತ್ತಿದೆ ಎಂದು ಹಿಜಾಬ್‌ ಹೋರಾಟಗಾರ್ತಿ ಆಲಿಯಾ ಟ್ಟಿಟ್‌ಗೆ ಪ್ರತಿಕ್ರಿಯಿಸಿದ ಸಚಿವರು, ಭಾರತದಲ್ಲಿ ಎಲ್ಲರೂ ಒಂದೇ ರೀತಿಯಲ್ಲಿ ಬದುಕಬೇಕು ಎಂಬುದನ್ನು ನಾವು ಸಾರುತ್ತೇವೆ. ಭಾರತದಿಂದ ಬಿಟ್ಟು ಹೋದವರ ಪರಿಸ್ಥಿತಿ ಏನಾಗಿದೆ, ಅಲ್ಲಿ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ಇದೆ. ಭಾರತದಲ್ಲಿ ಎಲ್ಲರಿಗೂ ಊಟ, ಔಷಧ ಸಿಗುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...