Monday, August 24, 2026
Monday, August 24, 2026

ಹೆಣ್ಣುಮಕ್ಕಳಿಗೆ ಈಗ ಶಿಕ್ಷಣ ಮುಖ್ಯ- ಶೋಭಾ ಕರಂದ್ಲಾಜೆ

Date:

ನಮ್ಮ ಹೆಣ್ಣು ಮಕ್ಕಳಿಗೆ ಬೇಕಾದದ್ದು ಶಿಕ್ಷಣ. ಅವರು ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ಅವರು ನಿಲ್ಲಬೇಕು. ಹಾಲ್ ಟಿಕೆಟ್‌ ಪಡೆದು ಪರೀಕ್ಷೆ ಬರೆಯದೆ ಪ್ರಚಾರ ಗಿಟ್ಟಿಸುತ್ತಿದ್ದಾರೆ. ಭಯೋತ್ಪಾದಕರು ಬೆಂಬಲ ಕೊಡುವ ರೀತಿಯಲ್ಲಿ ಭಾರತದಲ್ಲಿ ಏನೋ ನಡೆಯುತ್ತದೆ ಎನ್ನುವಂತೆ ಬಿಂಬಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಇದು ಭಾರತದಲ್ಲಿ ನಡೆಯುವುದಿಲ್ಲ. ಇಲ್ಲಿ ಪ್ರಜಾತಂತ್ರ ವ್ಯವಸ್ಥೆ ಇದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ನಿನ್ನೆ (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಪರೀಕ್ಷೆ ಬರೆಯಬೇಕು. ಪದವಿ ಪಡೆದು ಅವರ ಕಾಲ ಮೇಲೆ ಅವರು ನಿಲ್ಲಬೇಕು. ಈಗಲಾದರೂ ಸರಿ ಮಾಡಿಕೊಂಡು ಹೋಗಬೇಕು. ನಿಮ್ಮ ಹಿಂದೆ ನಿಂತ ಸಂಘಟನೆ, ಬದುಕಿನಲ್ಲಿ ಬರುವುದಿಲ್ಲ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಹಿಜಾಬ್‌ ಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ಪಷ್ಟ ನಿರ್ಧಾರ ತಿಳಿಸಿದೆ. ಸಮವಸ್ತ್ರ ಧರಿಸಿ ಬರಬೇಕೆಂದು ಹೇಳಿರುವುದರಿಂದ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಕೂಡ ಇದನ್ನೇ ಹೇಳಿದೆ. ಹೈಕೋರ್ಟ್‌ ಆದೇಶ ಮೀರಿ ಕೆಲವರು ಹಿಜಾಬ್‌ಗೆ ಬೆಂಬಲ ಕೊಡುತ್ತಿದ್ದಾರೆ. ಈ ದೇಶದ ನೆಲದ ಕಾನೂನನ್ನು ಪಾಲನೆ ಮಾಡುವುದಿಲ್ಲ. ಮನಬಂದಂತೆ ನಡೆದುಕೊಳ್ಳುತ್ತೇವೆ ಎಂಬುವುದು ಸಾಬೀತು ಮಾಡಿದ್ದಾರೆ. ಪೊಲೀಸರಿಗೆ, ಸರ್ಕಾರಕ್ಕೆ ಗೌರವ ಕೊಡುವುದಿಲ್ಲ. ಪೊಲೀಸ್‌ ವ್ಯವಸ್ಥೆ ಮೇಲೆ ದೌರ್ಜನ್ಯ, ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡುತ್ತಾರೆ. ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ದೇಶದಲ್ಲಿ ಎಲ್ಲರೂ ಒಟ್ಟಾಗಿ ಬದುಕಬೇಕು ಅನ್ನೋದು ನಮ್ಮ ಸಂಕಲ್ಪ ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಭಾರತ ಎತ್ತ ಸಾಗುತ್ತಿದೆ ಎಂದು ಹಿಜಾಬ್‌ ಹೋರಾಟಗಾರ್ತಿ ಆಲಿಯಾ ಟ್ಟಿಟ್‌ಗೆ ಪ್ರತಿಕ್ರಿಯಿಸಿದ ಸಚಿವರು, ಭಾರತದಲ್ಲಿ ಎಲ್ಲರೂ ಒಂದೇ ರೀತಿಯಲ್ಲಿ ಬದುಕಬೇಕು ಎಂಬುದನ್ನು ನಾವು ಸಾರುತ್ತೇವೆ. ಭಾರತದಿಂದ ಬಿಟ್ಟು ಹೋದವರ ಪರಿಸ್ಥಿತಿ ಏನಾಗಿದೆ, ಅಲ್ಲಿ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ಇದೆ. ಭಾರತದಲ್ಲಿ ಎಲ್ಲರಿಗೂ ಊಟ, ಔಷಧ ಸಿಗುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...