Thursday, February 5, 2026
Thursday, February 5, 2026

60 ಸಹಾಯಕ ನಗರ ಯೋಜಕರ ಹುದ್ದೆಗೆ ಕೆಪಿಎಸ್ ಸಿಅಧಿಸೂಚನೆ

Date:

ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಸಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಆಯೋಗವು 60 ಸಹಾಯಕ ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 30,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.

ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kpsc.kar.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...