Thursday, March 26, 2026
Thursday, March 26, 2026

ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ಪಾಸ್ ನೀಡಲು ಆದೇಶ

Date:

ಇದುವರೆಗೆ ಬೆಂಗಳೂರು ನಗರದ ಕಟ್ಟಡ ಕಾರ್ಮಿಕರಿಗೆ ಮಾತ್ರವೇ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ವಿತರಣೆಯನ್ನು ಕಟ್ಟಡ ಕಾರ್ಮಿಕರಿಗೆ ನೀಡಲಾಗುತ್ತಿತ್ತು. ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸೋದಾಗಿ ಕಳೆದ ಬಜೆಟ್ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.

ಅದರಂತೆ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡುವಂತೆ ಯೋಜನೆಯನ್ನು ಅನುಷ್ಠಾನಕ್ಕಾಗಿ ಸರ್ಕಾರ ಆದೇಶ ಹೊರಡಿಸಿದೆ.

ಈ ಯೋಜನೆ ಜಾರಿ ಸಂದರ್ಭದಲ್ಲಿ ಕೆಟಿಟಿಪಿ ಕಾಯಿದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯೋಜನೆ ಜಾರಿಗೊಳಿಸುವ ವೆಚ್ಚವನ್ನು ಮಂಡಳಿ ನಿಧಿಯಿಂದ ಭರಿಸಬೇಕು. 10 ಕೋಟಿ ರೂಗಿಂತ ಹೆಚ್ಚಾದಲ್ಲಿ ಸಚಿವ ಸಂಪುಟ ಸಭೆಯಿಂದ ಅನುಮೋದನೆ ಪಡೆಯಬೇಕು ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ರಾಜ್ಯಾದ್ಯಂತ ಬಸ್ ಪಾಸ್ ಯೋಜನೆಯನ್ನು ಎಲ್ಲಾ ಕಟ್ಟಡ ಕಾರ್ಮಿಕರಿಗೆ ವಿಸ್ತರಿಸಲು ಆರ್ಥಿಕ ಇಲಾಖೆಯು ಏಪ್ರಿಲ್ 16ರಂದು ಅನುಮೋದನೆ ನೀಡಿದೆ. ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲೂ ಕಟ್ಟಡ ಕಾರ್ಮಿಕರು ಪ್ರಯಾಣಿಸಲು ರಿಯಾಯಿತಿ ದರದ ಬಸ್ ಪಾಸ್ ನೀಡಬಹುದು.

ಇದಕ್ಕಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅನುದಾನ ಇಟ್ಟಿರದ ಕಾರಣ, ಕಾರ್ಮಿಕ ಕಲ್ಯಾಣ ಮಂಡಳಿಯ ಅನುದಾನವನ್ನೇ ಬಳಸಿಕೊಂಡು,ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...