Tuesday, August 25, 2026
Tuesday, August 25, 2026

ದೇಶದ ಶೇರು ಮಾರುಕಟ್ಟೆಗಳಲ್ಲಿ ಸೂಚ್ಯಂಕ ಇಳಿಕೆ!

Date:

ಎರಡು ವಹಿವಾಟಿನ ದಿನಗಳಲ್ಲಿ ದೇಶದ ಷೇರು ಮಾರುಕಟ್ಟೆಗಳಲ್ಲಿ ಆಗಿರುವ ಕುಸಿತದ ಪರಿಣಾಮವಾಗಿ ಹೂಡಿಕೆದಾರರ ಸಂಪತ್ತಿನ ಮೌಲ್ಯವು ಒಟ್ಟು ₹ 6.47 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ.

ದೇಶದ ಷೇರು ಮಾರುಕಟ್ಟೆಗಳಲ್ಲಿ ಅಸ್ಥಿರ ವಹಿವಾಟು ಮುಂದುವರಿಯಲಿದೆ ಎಂಬುದು ನಮ್ಮ ನಿರೀಕ್ಷೆ. ಹಣದುಬ್ಬರ ಹೆಚ್ಚಳ ಹಾಗೂ ಅದರಿಂದ ಕಂಪನಿಗಳ ಲಾಭಾಂಶದ ಮೇಲೆ ಆಗಬಹುದಾದ ಪರಿಣಾಮದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಬಿಎಸ್‌ಇ ಸ್ಮಾಲ್‌ ಕ್ಯಾಪ್ ಸೂಚ್ಯಂಕವು ಶೇ 1.88ರಷ್ಟು, ಮಿಡ್‌ ಕ್ಯಾಪ್‌ ಸೂಚ್ಯಂಕವು ಶೇ 1.86ರಷ್ಟು ಇಳಿಕೆ ಕಂಡಿದೆ.
‘ಚೀನಾದಲ್ಲಿ ಕೆಲವೆಡೆ ಲಾಕ್‌ಡೌನ್‌ ಜಾರಿಗೆ ಬಂದಿರುವ ಕಾರಣ ಕಚ್ಚಾ ತೈಲದ ಬೆಲೆ ಕುಸಿಯಿತು. ದೇಶದ ಬಂಡವಾಳ ಮಾರುಕಟ್ಟೆಗಳಿಂದ ವಿದೇಶಿ ಹೂಡಿಕೆದಾರರು ಬಂಡವಾಳ ಹಿಂದಕ್ಕೆ ಪಡೆಯುವುದು ನಿಂತಿಲ್ಲ. ಇದರ ಜೊತೆಗೆ ಇತರ ಜಾಗತಿಕ ಅನಿಶ್ಚಿತತೆಗಳು ಕೂಡ ಮಾರುಕಟ್ಟೆಯಲ್ಲಿ ಕರಡಿಯ ಹಿಡಿತ ಬಲವಾಗುವಂತೆ ಮಾಡಿವೆ’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಸೋಮವಾರದ ವಹಿವಾಟಿನಲ್ಲಿ ಮುಂಬೈ ಷೇರು‍ಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 617 ಅಂಶ ಇಳಿಕೆಯಾಗಿ, 56,579ಕ್ಕೆ ತಲುಪಿತು.

ಶುಕ್ರವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 714 ಅಂಶ ಇಳಿಕೆ ಕಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ ಸೋಮವಾರ 218 ಅಂಶ ಕುಸಿದಿದೆ ಎಂದು ತಿಳಿದುಬಂದಿದೆ.

ಅಮೆರಿಕದ ಫೆಡರಲ್‌ ರಿಸರ್ವ್‌ ಶೀಘ್ರದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಬಡ್ಡಿ ದರ ಹೆಚ್ಚಿಸಬಹುದು ಎಂಬ ಕಳವಳವೂ ಇದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಣ್ಣ ಹೂಡಿಕೆಗಳ ಸಂಶೋಧನಾ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕ ಹೇಳಿದ್ದಾರೆ.

ಚೀನಾದ ಷೇರುಪೇಟೆಗಳಲ್ಲಿ ಕೂಡ ಸೋಮವಾರ ಕುಸಿತ ಕಂಡುಬಂದಿದೆ. ಟೋಕಿಯೊ, ಹಾಂಗ್‌ಕಾಂಗ್‌, ಸೋಲ್‌ ಮಾರುಕಟ್ಟೆಗಳೂ ಕುಸಿದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಶೇಕಡ 4.44ರಷ್ಟು ಕಡಿಮೆ ಆಗಿ, 101.92 ಡಾಲರ್‌ಗೆ ತಲುಪಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...