Thursday, March 26, 2026
Thursday, March 26, 2026

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಜಾರಿಗೆ

Date:

ರಾಜ್ಯಾದ್ಯಂತ ಕೊರೋನಾ 4ನೇ ಅಲೆ ಬರುವ ಸಾಧ‍್ಯತೆ ಇರುವುದರಿಂದ ರಾಜ್ಯ ಸರ್ಕಾರ ಹೊಸ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅವುಗಳೆನ್ನು ಎಂಬುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಈ ಮಾರ್ಗ ಸೂಚಿಯನ್ನು ಕಡ್ಡಾಯಗೊಳಿಸಿ ಸರ್ಕಾರ ನಿನ್ನೆ (ಸೋಮವಾರ) ಆದೇಶ ಹೊರಡಿಸಿದೆ.

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ‍್ಯಕ್ಷತೆಯಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಂಚರಿಸುವ ವೇಳೆ ಉಗುಳಿದರೆ ದಂಡ ವಿಧಿಸಲು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಫೆಬ್ರವರಿ 28ರಿಂದ ಕೊರೋನಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿತ್ತು. ಆದರೆ,ಕೊರೋನಾ ಪ್ರಕರಣಗಳು ಕಡಿಮೆಯಾದ ಕಾರಣ ಸಾರ್ವಜನಿಕರಿಗೆ ಕೊರೋನಾ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ಪ್ರಸ್ತುತ ದೆಹಲಿ, ಹರಿಯಾಣ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪ್ರತಿದಿನ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಳಗೊಳ್ಳುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...