Saturday, February 7, 2026
Saturday, February 7, 2026

ಉಕ್ರೇನಿಗೆ ಇತರೆ ದೇಶಗಳ ನೆರವು, ರಷ್ಯದಿಂದ 3ನೇ ಮಹಾಯುದ್ಧ ಬೆದರಿಕೆ

Date:

ಉಕ್ರೇನ್‌ಗೆ ಪಾಶ್ಚಾತ್ಯ ರಾಷ್ಟ್ರಗಳು ಶಸ್ತ್ರಾಸ್ತ್ರ ಪೂರೈಸುವುದನ್ನು ವಿರೋಧಿಸಿರುವ ರಷ್ಯಾ, ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ಉಕ್ರೇನ್‌ಗೆ ಮತ್ತಷ್ಟು ಶಸ್ತ್ರಾಸ್ತ್ರ ಪೂರೈಕೆ ಮಾಡುವ ಕುರಿತು ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ನಡುವೆ ಇಂದು ಸಭೆ ನಡೆ. ಈ ಹಿನ್ನೆಲೆಯಲ್ಲಿ ರಷ್ಯಾ ಹೇಳಿಕೆ ಕುತೂಹಲ ಕೆರಳಿಸಿದೆ.

ಈ ಕುರಿತು ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್‌ ಲಾವ್ರೊವ್ ಅವರು, ನಿಜ, ನೀವು 3ನೇ ಮಹಾ ಯುದ್ಧವನ್ನು ಕಡೆಗಣಿಸಲು ಸಾಧ್ಯವೇ ಇಲ್ಲ. ಮೂರನೇ ಮಹಾಯುದ್ಧ ಆರಂಭವಾಗುವ ಅಪಾಯ ಗಂಭೀರಗೊಳ್ಳುತ್ತಿದೆ. ಅಲ್ಲದೆ, ಉಕ್ರೇನ್‌ ಶಾಂತಿ ಮಾತುಕತೆಗಳನ್ನು ವಿಫಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಷ್ಯಾ ಯುದ್ಧ ಸಾರಿದಾಗಿನಿಂದಲೂ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರು ಪಾಶ್ಚಾತ್ಯ ರಾಷ್ಟ್ರಗಳಿಂದ ಮಿಲಿಟರಿ ನೆರವು ಕೇಳುತ್ತಲೇ ಬಂದಿದ್ದಾರೆ. ಶಸ್ತ್ರಾಸ್ತ್ರಗಳಿದ್ದರೆ, ಉಕ್ರೇನ್‌ ಪಡೆಗಳು ಯುದ್ಧ ಗೆಲ್ಲುವುದಾಗಿ ಅವರು ಹೇಳಿದ್ದಾರೆ. ಆದ್ದರಿಂದ, ಮಾಸ್ಕೋದ ಎಚ್ಚರಿಕೆಯ ನಡುವೆಯೂ ಪಾಶ್ಚಾತ್ಯ ರಾಷ್ಟ್ರಗಳು ಈಗ ಉಕ್ರೇನ್‌ಗೆ ಹೆಚ್ಚಿನ ಪ್ರಮಾಣದ ಮಿಲಿಟರಿ ನೆರವು ನೀಡಲು ಮುಂದೆ ಬರುತ್ತಿವೆ.

ಈ ಹಿಂದೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ವಾರ ಉಕ್ರೇನ್‌ ರಾಜಧಾನಿ ಕೀವ್‌ಗೆ ತೆರಳಿದ್ದ ಅಮೆರಿಕದ ರಕ್ಷಣಾ ಇಲಾಖೆಯ ಮುಖ್ಯಸ್ಥ ಲಾಯ್ಡ್ ಆಸ್ಟಿನ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಝೆಲೆನ್‌ಸ್ಕಿ ಅವರನ್ನು ಭೇಟಿಯಾಗಿ 53 ಸಾವಿರ ಕೋಟಿ ರೂ. ಮೊತ್ತದ ಮಿಲಿಟರಿ ನೆರವಿನ ಭರವಸೆ ನೀಡಿ ಬಂದಿದ್ದಾರೆ.

ಉಕ್ರೇನ್‌ಗೆ ಮತ್ತಷ್ಟು ಶಸ್ತ್ರಾಸ್ತ್ರಗಳನ್ನು ಪೂರೈಸುವ ಕುರಿತು ಚರ್ಚಿಸಲು ಅಮೆರಿಕ ನೀಡಿರುವ ಆಹ್ವಾನದ ಮೇರೆಗೆ 40 ದೇಶಗಳು ಇಂದು ಮಂಗಳವಾರ ಜರ್ಮನಿಯಲ್ಲಿ ಭದ್ರತಾ ಶೃಂಗಸಭೆ ನಡೆಸಲಿವೆ.

ಹಾಗೆಯೇ, ಉಕ್ರೇನ್‌ನಲ್ಲಿ ಯುದ್ಧ ಮುಗಿದ ನಂತರ ದೀರ್ಘಾವಧಿಯ ಭದ್ರತೆಯನ್ನು ಖಚಿತಪಡಿಸುವ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...