Thursday, October 3, 2024
Thursday, October 3, 2024

ಚುನಾವಣಾ ತಂತ್ರಗಾರ ಕಿಶೋರ್ ಈಗ ಕಾಂಗ್ರೆಸ್ ಗೆ ಆಧಾರ

Date:

ಸತತ 2 ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು, ಹಲವು ರಾಜ್ಯಗಳಲ್ಲಿ ಇದ್ದ ಅಧಿಕಾರವನ್ನೂ ಕಳೆದುಕೊಂಡ ಕಾಂಗ್ರೆಸ್‌, ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎದುರಾಗಬಹುದಾದ ರಾಜಕೀಯ ಸವಾಲುಗಳನ್ನು ಮೆಟ್ಟಿನಿಲ್ಲಲು ಉನ್ನತಾಧಿಕಾರವುಳ್ಳ ಕಾರ್ಯಪಡೆ- 2024 ರಚಿಸಿದೆ ಎಂದು ತಿಳಿದುಬಂದಿದೆ.

ಜೊತೆಗೆ ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲು ಮೇ 13ರಿಂದ ರಾಜಸ್ಥಾನದ ಉದಯ್‌ಪುರದಲ್ಲಿ 3 ದಿನಗಳ ಚಿಂತನ ಶಿಬಿರ ಆಯೋಜನೆಗೂ ನಿರ್ಧರಿಸಿದೆ.

ಈ ಶಿಬಿರದಲ್ಲಿ 400ಕ್ಕೂ ಹೆಚ್ಚು ಆಹ್ವಾನಿತ ಸದಸ್ಯರು ಭಾಗಿಯಾಗಲಿದ್ದಾರೆ.
ವಿಶೇಷವೆಂದರೆ, 2024ರ ಚುನಾವಣೆ ಗೆಲ್ಲುವ ರಣತಂತ್ರಗಳ ಕುರಿತು, ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ಒಳಗೊಂಡ ಪಕ್ಷದ ಹಿರಿಯ ನಾಯಕರ ತಂಡಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದರು. ಮತ್ತೊಂದೆಡೆ ಇಂಥದ್ದೇ ವಿಷಯದ ಕುರಿತು ವರದಿ ಸಲ್ಲಿಸಲು ಸ್ವತಃ ಸೋನಿಯಾ ಕೂಡಾ 8 ಜನರ ಸಮಿತಿ ರಚಿಸಿದ್ದು, ಅದು ಏ.21ರಂದು ತನ್ನ ವರದಿ ಸಲ್ಲಿಸಿತ್ತು.

ಈ ವರದಿಗಳ ಬಗ್ಗೆ ಚರ್ಚಿಸಲು ಸೋನಿಯಾ ನೇತೃತ್ವದಲ್ಲಿ ಮಂಗಳವಾರ ಪಕ್ಷದ ಹಿರಿಯ ನಾಯಕರು ಇಲ್ಲಿ ಸಭೆ ಸೇರಿದ್ದರು. ಅದರಲ್ಲಿ ಎರಡೂ ವರದಿಗಳ ಬಗ್ಗೆ ಚರ್ಚಿಸಿದ ಬಳಿಕ, ‘ಉನ್ನತಾಧಿಕಾರವುಳ್ಳ ಕಾರ್ಯಪಡೆ- 2024’ ರಚನೆ ಮತ್ತು ಉದಯ್‌ಪುರದಲ್ಲಿ ಚಿಂತನ ಶಿಬಿರ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಪಕ್ಷದ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಹೇಳಿದ್ದಾರೆ.

ಸಭೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್‌, ಸುರ್ಜೇವಾಲಾ, ಮುಕುಲ್‌ ವಾಸ್ನಿಕ್‌, ದಿಗ್ವಿಜಯ್‌ ಸಿಂಗ್‌, ಜೈರಾಮ್‌ ರಮೇಶ್‌, ಪಿ.ಚಿದಂಬರಂ ಉಪಸ್ಥಿತರಿದ್ದರು.

ಪ್ರಶಾಂತ್‌ ಸೇರ್ಪಡೆಗೆ ಕಾಂಗ್ರೆಸ್‌ನಲ್ಲೇ ಅಪಸ್ವರ
ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು, ಅವರಿಗೆ ಪಕ್ಷದ ನೀತಿ ನಿರ್ಧಾರ ಕೈಗೊಳ್ಳಲು ಮುಕ್ತ ಅವಕಾಶ ನೀಡುವ ಬಗ್ಗೆ ಕಾಂಗ್ರೆಸ್‌ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಪ್ರಶಾಂತ್‌ ಸೇರ್ಪಡೆ ಬಗ್ಗೆ ಮಂಗಳವಾರ ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಈ ವೇಳೆ ಸತತ ಸೋಲಿನ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಮತ್ತೆ ಜೀವ ತುಂಬಲು ಪ್ರಶಾಂತ್‌ ಕಿಶೋರ್‌ ಸೇರ್ಪಡೆ ಅಗತ್ಯ ಮತ್ತು ಅವರಿಗೆ ಮುಕ್ತ ಅವಕಾಶ ನೀಡುವ ಬಗ್ಗೆ ಪ್ರಿಯಾಂಕಾ ವಾದ್ರಾ ಮತ್ತು ಅಂಬಿಕಾ ಸೋನಿ ಒಲವು ವ್ಯಕ್ತಪಡಿಸಿದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...