Friday, October 4, 2024
Friday, October 4, 2024

ರಷ್ಯಾಗೆ ಉಕ್ರೇನ್ ಯುದ್ಧ ಚ್ಯೂಯಿಂಗ್ ಗಮ್ ಆಗುತ್ತಿದೆಯೆ?

Date:

ಎರಡು ತಿಂಗಳಿನಿಂದ ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ, ಮರಿಯುಪೋಲ್‌ ಬಳಿಕ ಉಕ್ರೇನ್‌ನ ಮತ್ತೊಂದು ನಗರವನ್ನು ವಶಕ್ಕೆ ತೆಗೆದುಕೊಂಡಿದೆ. ಲುಕಾಂಕ್ಷ್ ವಲಯದಲ್ಲಿರುವ ಕ್ರೆಮಿನ್ನಾ ನಗರದಲ್ಲಿ ಹಲವು ದಿನಗಳ ಕಾಳಗದ ಬಳಿಕ ವಶಕ್ಕೆ ಪಡೆಯುವಲ್ಲಿ ರಷ್ಯಾ ಸಫಲವಾಗಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.

ಆದರೆ ಈ ಬಗ್ಗೆ ಉಕ್ರೇನ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಈ ಮಧ್ಯೆ, ಮೂರನೇ ಮಹಾಯುದ್ಧದ ಕುರಿತು ಉಕ್ರೇನ್‌ ಪ್ರಚೋದನೆ ನೀಡಬಾರದು. ಜತೆಗೆ ಅಣ್ವಸ್ತ್ರ ಬಿಕ್ಕಟ್ಟಿನ ಬೆದರಿಕೆಯನ್ನು ಉಕ್ರೇನ್‌ ಲಘುವಾಗಿ ಪರಿಗಣಿಸಬಾರದು ಎಂದು ರಷ್ಯಾದ ರಾಯಭಾರಿ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ರೈಲು ಹಾಗೂ ಇಂಧನ ಕೇಂದ್ರಗಳ ಮೇಲೆ ರಷ್ಯಾ ತನ್ನ ದಾಳಿಯನ್ನು ತೀವ್ರಗೊಳಿಸಿದೆ.
ರಷ್ಯಾ ಹೊಸದಾಗಿ ವಶಪಡಿಸಿಕೊಂಡಿರುವ ಕ್ರಿಮಿನ್ನಾ ಉಕ್ರೇನ್‌ ರಾಜಧಾನಿ ಕೀವ್‌ನಿಂದ 575 ಕಿ.ಮೀ. ದೂರದಲ್ಲಿದೆ.

ಉಕ್ರೇನ್‌ನ ಎರಡನೇ ಅತಿದೊಡ್ಡ ನಗರ ಖಾರ್ಕೀವ್‌ ಮೇಲೆ ರಷ್ಯಾದ ದಾಳಿ ಮುಂದುವರೆದಿದೆ.

ಉಕ್ರೇನ್‌ನ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ
ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್‌ನಲ್ಲಿ ಉಳಿದಿರುವ ಉಕ್ರೇನ್‌ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

ಮರಿಯುಪೋಲ್‌ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್‌ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ

ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ. ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ.

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್‌ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...