ರಾಜ್ಯದ ಜನರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ.
ರಾಜ್ಯದಲ್ಲಿ ದಿನದ 24 ಗಂಟೆ ವಿದ್ಯುತ್ ಸರಬರಾಜಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಕಾರ್ಕಳದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ.
ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಎದುರಾಗಿಲ್ಲ. ದಿನದ 24 ಗಂಟೆ ವಿದ್ಯುತ್ ಸರಬರಾಜಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಮುಂದಿನ 10 ವರ್ಷ ಮುಂದಿಟ್ಟುಕೊಂಡು ದಿನದ 24 ಗಂಟೆಯೂ ವಿದ್ಯುತ್ ಪೂರೈಕೆಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ. ವಿದ್ಯುತ್ ಪರಿವರ್ತಕ, ವಿದ್ಯುತ್ ಸರಬರಾಜು ನಿರ್ವಹಣೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.