ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.
ಪ್ರತಿ ಪೆಟ್ರೋಲ್ ಬಂಕ್ಗಳಲ್ಲೂ ಮೋದಿ ಅವರು ಸಿಲಿಂಡರ್ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್ಗಳ ಬೆಲೆ ಎಷ್ಟಿದೆ, ಸಿಲಿಂಡರ್ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ತಿಳಿಸಿದರು.
ಮೋದಿಯವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು ಎಂದರು.
ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.