Monday, December 15, 2025
Monday, December 15, 2025

ಉತ್ತರಪ್ರದೇಶದಲ್ಲಿ ಧ್ವನಿವರ್ಧಕ ಮಾರ್ಗಸೂಚಿ ಜಾರಿಗೆ

Date:

ಉತ್ತರ ಪ್ರದೇಶ ಸರ್ಕಾರದ ಸೂಚನೆ ಮೇರೆಗೆ ಧಾರ್ಮಿಕ ಸ್ಥಳಗಳಿಂದ ಅಕ್ರಮವಾಗಿ ಅಳವಡಿಸಲಾಗಿದ್ದ 11,000 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾಡಳಿತದಿಂದ ಸೂಕ್ತ ಅನುಮತಿ ಪಡೆಯದೇ ಅಳವಡಿಸಿರುವ ಅಥವಾ ಅನುಮತಿಗಿಂತ ಹೆಚ್ಚಿನ ಪ್ರಮಾಣದ ಶಬ್ದ ಇರುವ ಧ್ವನಿವರ್ಧಕಗಳನ್ನು ನಾವು ತೆರವುಗೊಳಿಸುತ್ತಿದ್ದೇವೆ. ಧ್ವನಿವರ್ಧಕಗಳ ನಿಯಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಆದೇಶವನ್ನು ಪರಿಗಣನೆಗೆ ತೆಗೆದುಕೊಂಡು ನಾವು ಕಾರ್ಯಾಚರಣೆ ಕೈಗೊಂಡಿದ್ದೇವೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದರು.

ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ನಂಬಿಕೆಗಳ ಪ್ರಕಾರ ಪೂಜೆ, ಪ್ರಾರ್ಥನೆ ಸಲ್ಲಿಸುವ ಸ್ವಾತಂತ್ರ್ಯವಿದೆ. ಆದರೆ, ಇತರರಿಗೆ ಯಾವುದೇ ತೊಂದರೆಯಾಗದಂತೆ ಧ್ವನಿವರ್ಧಕಗಳ ಶಬ್ದವು ಆವರಣದಿಂದ ಹೊರಗೆ ಹೋಗಬಾರದು ಎಂದು ಸಿಎಂ ಯೋಗಿ ಹೇಳಿದ್ದರು.

ಇದರೊಂದಿಗೆ 35,000 ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿ ವರ್ಧಕಗಳನ್ನು ತೆಗೆದುಹಾಕಲು ಮತ್ತು ಕಾನೂನು ಬದ್ಧವಾಗಿ ಧ್ವನಿ ವರ್ಧಕಗಳ ಶಬ್ದವನ್ನು ಕಡಿಮೆ ಮಾಡಲು ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಅದರಂತೆ ಇಲ್ಲಿಯವರೆಗೆ 10,923 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. 35,221 ಧ್ವನಿವರ್ಧಕಗಳ ಧ್ವನಿಯನ್ನು ಮಿತಿಗೊಳಿಸಲಾಗಿದೆ.
ನಾವು ತೆರವು ಮಾಡಿರುವ, ಮಾಡುತ್ತಿರುವ ಧ್ವನಿವರ್ಧಕಗಳು ಅನಧಿಕೃತವಾಗಿವೆ.

ಕಳೆದ ವಾರ ಹಿರಿಯ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಮಾರ್ಗಸೂಚಿಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳುತ್ತಿರುವುದು ಗಮನಾರ್ಹ ವಿಷಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...