ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದಾರೆ. 6 ತಿಂಗಳ ಅವಧಿಗೆ ಸೇವೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಇನ್ನು ರಾಜ್ಯದಲ್ಲಿ ಕೊರೊನಾ ಕುರಿತು ಆತಂಕ ಪಡಬೇಕಾದ ಪರಿಸ್ಥಿತಿ ಇಲ್ಲ.ತಕ್ಷಣ ಕಠಿಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿಯೂ ವೈಜ್ಞಾನಿಕವಾಗಿ ಕಂಡುಬಂದಿಲ್ಲ. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.
ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಇಲಾಖೆ ಸೇವೆಗೆ ತೆಗೆದುಕೊಂಡಿದ್ದ ನೌಕರರ ಅವಧಿಯನ್ನು ಕೊರೊನಾ ಇಲ್ಲದಿದ್ದರೂ 18 ತಿಂಗಳು ಮುಂದುವರೆಸಿದ್ದೆವು. ಇದೀಗ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು ಮುಂದುವರೆಸಲು ಕೇಳಿದ್ದೇವೆ. ಆರ್ಥಿಕ ಇಲಾಖೆ ಅನುಮತಿ ನೀಡಿದರೆ ಮುಂದುವರೆಸಲಾಗುವುದು ಎಂದು ಹೇಳಿದರು.