Monday, August 24, 2026
Monday, August 24, 2026

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡದಿರಿ- ಓಮರ್ ಅಬ್ದುಲ್ಲ

Date:

ಕಣಿವೆ ರಾಜ್ಯವನ್ನು ಕರ್ನಾಟಕ ಮಾಡುವ ಪ್ರಯತ್ನವನ್ನು ತಡೆಯಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿ.ಎಂ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಅವರು ತಿಳಿಸಿದರು.

ಶ್ರೀನಗರದಲ್ಲಿ ಪಕ್ಷದ ಯುವ ಮುಖಂಡರೊಂದಿಗೆ ಸಂವಾದದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಮ್ಮ ಜೀವನ ಶೈಲಿಯೇ ನಿಮಗೆ ಸಮಸ್ಯೆಯಾಗಿದೆ ಯಾಕೆ? ಆಜಾನ್‌ಗಾಗಿ ಲೌಡ್‌ ಸ್ವೀಕರ್‌ ಬಳಸಬೇಡಿ ಎಂದು ಹೇಳುತ್ತಿರುವುದೇಕೆ? ನಾವು ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಬೇಡಿ ಎಂದೂ ಹೇಳಿಲ್ಲ. ಹಲಾಲ್‌ ಕಟ್‌ ಮಾಂಸ ಖರೀದಿಸಬೇಡಿ ಎಂದು ಹೇಳುತ್ತಿದ್ದೀರೇಕೆ? ಹಲಾಲ್‌ ಮಾಂಸ ತಿನ್ನುವಂತೆ ನಿಮ್ಮನ್ನು ಒತ್ತಾಯಪಡಿಸಿಲ್ಲ. ಮುಸ್ಲಿಂತೇರರಿಗೆ ಹಲಾಲ್‌ ಕಟ್‌ ಮಾಂಸ ತಿನ್ನುವಂತೆ ಒತ್ತಾಯಪಡಿಸಿದ ಯಾವುದಾದರೂ ಒಬ್ಬ ಮುಸ್ಲಿಮನನ್ನು ತೋರಿಸಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪಾಲಿಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದಲ್ಲಿ ನಮ್ಮದು ಜಾತ್ಯತೀತ ದೇಶ ಎಂದು ಪ್ರತಿಪಾದಿಸಲಾಗಿದೆ. ಇದರ ಪ್ರಕಾರ ಎಲ್ಲ ಧರ್ಮಗಳು ಒಂದೇ. ಎಲ್ಲ ಧರ್ಮಗಳನ್ನು ಸಮಾನವಾಗಿ ಸ್ವೀಕರಿಸಿರುವ ಜಾತ್ಯತೀತ ಭಾರತವನ್ನು ಜಮ್ಮು -ಕಾಶ್ಮೀರ ಸೇರಿಕೊಂಡಿದೆ. ನಾವು ಒಪ್ಪಿಕೊಂಡ ದೇಶವಾಗಿ ಇಂದು ಭಾರತ ಉಳಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ನಿರ್ಬಂಧ ಹೇರಿ ವಿವಾದ ಎಬ್ಬಿಸಲಾಗಿದೆ.
ಧರ್ಮದ ವಿಚಾರದಲ್ಲಿ ಮೂಗು ತೂರಿಸುವ ಕೆಲಸವನ್ನು ಯಾವುದೇ ಸರ್ಕಾರಗಳು ಮಾಡಬಾರದು ಎಂದು ಸಲಹೆ ನೀಡಿದರು.

ಒಂದು ಧರ್ಮವು ಮತ್ತೊಂದು ಧರ್ಮಕ್ಕಿಂತ ಶ್ರೇಷ್ಠವೆಂದು ಪರಿಗಣಿಸುವುದಾಗಿ ನಮಗೆ ಹೇಳಿಲ್ಲ. ಒಂದು ವೇಳೆ ಹಾಗೆ ಹೇಳಿದ್ದರೆ ನಮ್ಮ ನಿರ್ಧಾರವೂ ಬೇರೆಯಾಗಿರುತ್ತಿತ್ತೇನೊ’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಬೇಸಿಗೆಯ ರಜೆ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿರುವುದು ಸ್ವಾಗತಾರ್ಹ.

ಮುಖ್ಯ ನ್ಯಾಯಮೂರ್ತಿಗಳು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...