ಕೊರೊನಾ ಮಹಾಮಾರಿ ಹೋಗಿದೆ ಎಂದು ಜನರೆಲ್ಲಾ ನಿರಾಳರಾಗಿದ್ದಾರೆ. ಎಷ್ಟೋ ಜನ ಮಾಸ್ಕ್ ಹಾಕಿಕೊಳ್ಳದೆ ಓಡಾಡುತ್ತಾರೆ. ಮೇ ಮೊದಲ ವಾರದಲ್ಲೇ ಕೋವಿಡ್ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ಡಾ.
ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
ರಾಜ್ಯವು ಅಗತ್ಯವಾದ ಜಾಗೃತಿಯನ್ನು ಮೂಡಿಸಬೇಕು ಮಾಸ್ಕ್ ಧರಿಸುವುದು, ಎಲ್ಲಾ ಸಾರ್ವಜನಿಕ ಪ್ರದೇಶಗಳು, ಸಭೆಗಳಲ್ಲಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.
ಈ ಬಾರಿ ಮೊದಲ ಅಲೆಗಿಂತ ಹೆಚ್ಚೆಚ್ಚು ಸೋಂಕು ವರದಿಯಾಗಲಿದೆ. ಮೇ ಮೊದಲ ವಾರದ ವೇಳೆಗೆ ನಿತ್ಯ 25 ಸಾವಿರ ಕೇಸ್ ವರದಿಯಾಗಲಿದೆ. ಸಾವು ಕೂಡಾ ಮೊದಲು ಅಲೆಗಿಂತ ಕಡಿಮಯಿಲ್ಲದೇ ವರದಿಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ಕೊರೊನಾ ತಾಂತ್ರಿಕ ಸಮಿತಿ ಸದಸ್ಯರಾದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.