Thursday, July 9, 2026
Thursday, July 9, 2026

ಕೇಂದ್ರವು ಇಂಧನದ ತೆರಿಗೆ ಇಳಿಸಲಿ ಬಳಿಕ ನಾವೂ ಇಳಿಸುತ್ತೇವೆ- ಉದ್ಧವ್

Date:

ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆಗೆ ಜವಾಬ್ದಾರಿ ಅಲ್ಲ. ನೀವು ಕೇಂದ್ರದಲ್ಲಿ ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಹೆಚ್ಚಿನ ತೆರಿಗೆ ಹಾಕಿಕೊಂಡು ಇದೀಗ ರಾಜ್ಯ ಸರ್ಕಾರಗಳ ಮೇಲೆ ಬೆರಳು ತೊರಿಸುತ್ತಿದೆ. ಮೊದಲು ಕೇಂದ್ರ ಇಂಧನಗಳ ತೆರಿಗೆಯನ್ನು ಇನ್ನಷ್ಟು ಕಡಿತಗೊಳಿಸಲಿ ಆ ಬಳಿಕ ರಾಜ್ಯಗಳಲ್ಲೂ ಕಡಿತಗೊಳಿಸಬಹುದು. ಮಹಾರಾಷ್ಟ್ರ 15% ಜಿಎಸ್‍ಟಿ ತೆರಿಗೆ ಸಂಗ್ರಹದ ಮೂಲಕ ಅತಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡರು.

ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು
ಕಡಿತಗೊಳಿಸುವಂತೆ ನರೇಂದ್ರ ಮೋದಿ ಬಿಜೆಪಿಯೇತರ ರಾಜ್ಯಗಳಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈನಲ್ಲಿ ಡೀಸೆಲ್ ಲೀ. 24.38 ರೂ. ಕೇಂದ್ರ ತೆರಿಗೆ ಮತ್ತು 22.37 ರೂ. ರಾಜ್ಯ ತೆರಿಗೆ. ಪೆಟ್ರೋಲ್ 31.58 ರೂ.
ಕೇಂದ್ರ ಮತ್ತು 32.55 ರೂ. ರಾಜ್ಯ ತೆರಿಗೆ. ಇದರಿಂದಾಗಿ ರಾಜ್ಯದಲ್ಲಿ ಇಂಧನ ದರ ಏರಿಕೆ ಕಂಡಿದೆ. ನಾವು ರಾಜ್ಯದಲ್ಲಿ ಈಗಾಗಲೇ ನ್ಯಾಚುರಲ್ ಗ್ಯಾಸ್ ಮೇಲಿನ ತೆರಿಗೆ ವಿನಾಯಿತಿ ನೀಡಿದ್ದೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...