Monday, August 24, 2026
Monday, August 24, 2026

ಕೇಂದ್ರವು ಇಂಧನದ ತೆರಿಗೆ ಇಳಿಸಲಿ ಬಳಿಕ ನಾವೂ ಇಳಿಸುತ್ತೇವೆ- ಉದ್ಧವ್

Date:

ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆಗೆ ಜವಾಬ್ದಾರಿ ಅಲ್ಲ. ನೀವು ಕೇಂದ್ರದಲ್ಲಿ ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಹೆಚ್ಚಿನ ತೆರಿಗೆ ಹಾಕಿಕೊಂಡು ಇದೀಗ ರಾಜ್ಯ ಸರ್ಕಾರಗಳ ಮೇಲೆ ಬೆರಳು ತೊರಿಸುತ್ತಿದೆ. ಮೊದಲು ಕೇಂದ್ರ ಇಂಧನಗಳ ತೆರಿಗೆಯನ್ನು ಇನ್ನಷ್ಟು ಕಡಿತಗೊಳಿಸಲಿ ಆ ಬಳಿಕ ರಾಜ್ಯಗಳಲ್ಲೂ ಕಡಿತಗೊಳಿಸಬಹುದು. ಮಹಾರಾಷ್ಟ್ರ 15% ಜಿಎಸ್‍ಟಿ ತೆರಿಗೆ ಸಂಗ್ರಹದ ಮೂಲಕ ಅತಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡರು.

ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು
ಕಡಿತಗೊಳಿಸುವಂತೆ ನರೇಂದ್ರ ಮೋದಿ ಬಿಜೆಪಿಯೇತರ ರಾಜ್ಯಗಳಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈನಲ್ಲಿ ಡೀಸೆಲ್ ಲೀ. 24.38 ರೂ. ಕೇಂದ್ರ ತೆರಿಗೆ ಮತ್ತು 22.37 ರೂ. ರಾಜ್ಯ ತೆರಿಗೆ. ಪೆಟ್ರೋಲ್ 31.58 ರೂ.
ಕೇಂದ್ರ ಮತ್ತು 32.55 ರೂ. ರಾಜ್ಯ ತೆರಿಗೆ. ಇದರಿಂದಾಗಿ ರಾಜ್ಯದಲ್ಲಿ ಇಂಧನ ದರ ಏರಿಕೆ ಕಂಡಿದೆ. ನಾವು ರಾಜ್ಯದಲ್ಲಿ ಈಗಾಗಲೇ ನ್ಯಾಚುರಲ್ ಗ್ಯಾಸ್ ಮೇಲಿನ ತೆರಿಗೆ ವಿನಾಯಿತಿ ನೀಡಿದ್ದೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...