Saturday, March 28, 2026
Saturday, March 28, 2026

ಸುಮಾತ್ರಾ ದ್ವೀಪದಲ್ಲಿ ಚಿನ್ನದಗಣಿ ಕುಸಿದು 12 ಸಾವು

Date:

ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಅನಧಿಕೃತ ಚಿನ್ನದ ಗಣಿಗಾರಿಕೆ ನಡೆಯುತ್ತದ್ದಾಗ ಭೂಕುಸಿತ ಸಂಭವಿಸಿದ್ದ 12 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಗಂಟೆಗಳ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಗಾಯಗೊಂಡ ಇಬ್ಬರು ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಮತ್ತು 12 ಇತರ ಮಹಿಳೆಯರ ದೇಹಗಳನ್ನು ಅವಶೇಷಗಳಿಂದ ಹೊರತೆಗೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಮರ್ಲಾನ್ ರಾಜಗುಕ್ಗುಕ್ ಹೇಳಿದರು.

ಉತ್ತರ ಸುಮಾತ್ರದ ಮಾಂಡೈಲಿಂಗ್ ನಟಾಲ್ ಜಿಲ್ಲೆಯಯ ಹಳ್ಳಿಯೊಂದರಲ್ಲಿ ಸ್ಥಳೀಯ ಗ್ರಾಮದ ಮಹಿಳೆಯರು ಚಿನ್ನದ ಗಣಿಯ ವಯಯದಲ್ಲಿ ಸುಮಾರು 2 ಮೀಟರ್ (6.5 ಅಡಿ) ಆಳದ ಹೊಂಡ ತೆಗೆದು ನಿನ್ನೆ ಸಂಜೆ ಚಿನ್ನದ ಮೆತ್ತಿರುವ ಕಲ್ಲು ಹೊಡೆದು ಸಂಗ್ರಹಿಸುವ ವೇಳೆ ಭೂಕುಸಿತ ಉಂಟಾಗಿದೆ.

ಇಲ್ಲಿನ ಬೆಟ್ಟ ಗುಡ್ಡದಲ್ಲಿ ಚಿನ್ನದ ನಿಕ್ಷೇಪ ವಿದ್ದು ಅದನ್ನು ತೆಗೆಯಲು ಸ್ತಳೀಯರು ಅಪಾಯವನ್ನು ಲೆಕ್ಕಿಸದೆ ಸಾಂಪ್ರದಾಯಕವಾಗಿ ಸಣ್ಣ ಗಣಿಗಾರಿಕೆ ನಡೆಸುತ್ತಾರೆ. ಚಿನ್ನದ ಮುಖ್ಯ ಮೂಲವಾಗಿದ್ದ ಈ ಪ್ರದೇಶದಲ್ಲಿ ಅಕಾರಿಗಳು ಅಕ್ರಮ ಚಿನ್ನದ ಹೊಂಡಗಳನ್ನು ಮುಚ್ಚಿದ್ದಾರೆ ಆದರೂ ಇಂಡೋನೇಷ್ಯಾದಲ್ಲಿ ಅನೌಪಚಾರಿಕ ಗಣಿಗಾರಿಕೆ ಕಾರ್ಯಾಚರಣೆಗಳು ಸಾಮಾನ್ಯವಾಗಿದೆ. ಹೆಚ್ಚಿನ ಅಪಾಯವಿರುವ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವ ಸಾವಿರಾರು ಜನರಿಗೆ ಅಲ್ಪ ಜೀವನೋಪಾಯವನ್ನು ಒದಗಿಸುತ್ತದೆ ಎಂದು ತಿಳಿದುಬಂದಿದೆ.

ಕಳೆದ ಫೆಬ್ರವರಿ 2019 ರಲ್ಲಿ ಉತ್ತರ ಸುಲವೆಸಿ ಪ್ರಾಂತ್ಯದ ಅಕ್ರಮ ಚಿನ್ನದ ಗಣಿಗಾರಿಕೆ ವೇಳೆ ಭೂಕುಸಿತ ಉಂಟಾಂಗಿ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...