Tuesday, October 1, 2024
Tuesday, October 1, 2024

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...