Sunday, September 20, 2026
Sunday, September 20, 2026

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...