Saturday, February 7, 2026
Saturday, February 7, 2026

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...