Sunday, December 7, 2025
Sunday, December 7, 2025

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...