Friday, May 22, 2026
Friday, May 22, 2026

ನನ್ನ ಕುಟುಂಬವನ್ನೇ ಸೆರೆ ಹಿಡಿಯಲು ರಷ್ಯ ಪ್ರಯತ್ನಿಸಿತು- ಝೆಲೆನ್ಸ್ಕಿ

Date:

ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಇತ್ತೀಚಿನ ಸಂದರ್ಶನವೊಂದರಲ್ಲಿ ರಷ್ಯಾದ ಪಡೆಗಳು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ಸೆರೆ ಹಿಡಿಯಲು ತುಂಬಾ ಸಮೀಪಕ್ಕೆ ಬಂದಿದ್ದವು ಎಂದು ಹೇಳಿದ್ದಾರೆ.

ಉಕ್ರೇನ್ ಯುದ್ಧದ ಆರಂಭಿಕ ದಿನಗಳ ತೀವ್ರತೆಯನ್ನು ನೆನಪಿಸಿಕೊಳ್ಳುತ್ತಾ ಅವರು ಟೈಮ್ ನಿಯತಕಾಲಿಕೆಯೊಂದಿಗೆ ಮಾತನಾಡುವಾಗ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಾನು ಮತ್ತು ಪತ್ನಿ ಒಲೆನಾ ಝೆಲೆನ್‌ಸ್ಕಿ, ಮಲಗಿದ್ದ 17 ವರ್ಷದ ಮಗಳು ಮತ್ತು 9 ವರ್ಷದ ಮಗನನ್ನು ಎಬ್ಬಿಸಿ ಬಾಂಬ್ ದಾಳಿ ಆರಂಭವಾಗಿದೆ ಎಂದು ಹೇಳಿದ್ದೆವು ಎಂದು ಆ ಭೀಕರ ಕ್ಷಣಗಳನ್ನು ನೆನಪಿಸಿಕೊಂಡ ಝೆಲೆನ್‌ಸ್ಕಿ, ಆಗ ಹೊರಗಡೆ ಶಬ್ಧ ಜೋರಾಗಿತ್ತು. ಅಲ್ಲಿ ಸ್ಫೋಟಗಳು ಸಂಭವಿಸಿದ್ದವು’ ಎಂದು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆ ವೇಳೆಗಾಗಲೇ ತನ್ನನ್ನು ಗುರಿಯಾಗಿಸಿಕೊಂಡಿದ್ದರು ಮತ್ತು ಕಚೇರಿಗಳು ಸುರಕ್ಷಿತ ಸ್ಥಳವಲ್ಲ ಎಂದು ಶೀಘ್ರದಲ್ಲೇ ಸ್ಪಷ್ಟವಾಯಿತು. ಅವರನ್ನು ಮತ್ತು ಅವರ ಕುಟುಂಬದವರನ್ನು ಕೊಲ್ಲಲು ಅಥವಾ ಸೆರೆಹಿಡಿಯಲು ರಷ್ಯಾದ ಪಡೆಗಳು ಕೀವ್‌ಗೆ ಧುಮುಕಿರುವುದಾಗಿ ನನಗೆ ಮಾಹಿತಿ ದೊರಕಿತು ಎಂದು ತಿಳಿಸಿದ್ದಾರೆ.

ಉಕ್ರೇನ್‌ನ ಮಿಲಿಟರಿ ಗುಪ್ತಚರ ಸೇವೆಯ ಹಿರಿಯ ಅಧಿಕಾರಿ ಓಲೆಕ್ಸಿ ಅರೆಸ್ಟೋವಿಚ್, ಈ ದೃಶ್ಯವು ‘ವಿಚಿತ್ರವಾಗಿತ್ತು’ ಮತ್ತು ಝೆಲೆನ್‌ಸ್ಕಿ ಹೆಂಡತಿ ಮತ್ತು ಮಕ್ಕಳು ಇನ್ನೂ ಅಲ್ಲಿದ್ದಾಗ ರಷ್ಯಾದ ಪಡೆಗಳು ಎರಡು ಬಾರಿ ಕಾಂಪೌಂಡ್‌ಗೆ ದಾಳಿ ಮಾಡಲು ಯತ್ನಿಸಿದವು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...