Sunday, September 20, 2026
Sunday, September 20, 2026

ಗ್ರಾಪಂ ಮಟ್ಟದಲ್ಲಿ ವಿವೇಕಾನಂದ ಯುವಕ ಸಂಘ ರಚನೆ

Date:

ರಾಜ್ಯ ಸರ್ಕಾರ ಯುವ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ, ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ, ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಸಹಾಯಕ ನಿರ್ದೇಶಕರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯಾದ್ಯಂತ ಈಗಾಗಲೇ ಜಾರಿಯಲ್ಲಿರುವ ಯುವಸ್ಪಂದನಾ ಯೋಜನೆಯಡಿ ಈ ಸಂಘಗಳನ್ನು ರಚಿಸಿ, ಯುವಕರಿಗೆ ಅಗತ್ಯ ತರಬೇತಿ, ಆರ್ಥಿಕ ಚಟುವಟಿಕೆಗಳನ್ನು ಒದಗಿಸುವ ಹೊಣೆಗಾರಿಕೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಗೆ ವಹಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...