Tuesday, December 9, 2025
Tuesday, December 9, 2025

ವಿಶ್ವಸಂಸ್ಥೆ ಕಾರ್ಯದರ್ಶಿ ಉಕ್ರೇನ್ ಭೇಟಿ ವೇಳೆ ರಷ್ಯ ಬಾಂಬ್ ದಾಳಿ

Date:

ಕಳೆದೆರಡು ತಿಂಗಳಿನಿಂದ ಉಕ್ರೇನ್‌ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ, ಶುಕ್ರವಾರದಂದು ಉಕ್ರೇನ್‌ ರಾಜಧಾನಿಯ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಅವರು ಕೀವ್‌ಗೆ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಆ ನಗರದ ಮೇಲೆ ರಷ್ಯಾ ದಾಳಿ ನಡೆಸುವ ಮೂಲಕ ತನ್ನ ಉದ್ಧಟತನ ಪ್ರದರ್ಶಿಸಿದೆ ಎಂದು ತಿಳಿದುಬಂದಿದೆ.

ರಷ್ಯಾದ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್‌ಕಿ ಹಾಗೂ ಗುಟೆರಸ್‌ ಅವರ ನಡುವಿನ ಸಭೆ ಮುಕ್ತಾಯವಾದ ಕೆಲವೇ ನಿಮಿಷಗಳಲ್ಲಿ ಕೀವ್‌ ನಗರದ ಮೇಲೆ ದಾಳಿ ನಡೆಸಲಾಗಿದೆ. ಸಭೆ ನಡೆದ ಪ್ರಾಂತದಲ್ಲಿ ಯಾವುದೇ ದಾಳಿ ಆಗಿಲ್ಲ. ಹೀಗಾಗಿ ಗುಟೆರಸ್‌ ಹಾಗೂ ಅವರೊಂದಿಗಿದ್ದ ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರರು ಹೇಳಿದ್ದಾರೆ.

ಹಲವು ದಶಕಗಳ ಹಿಂದೆಯೇ ನಿರ್ಮಾಣಗೊಂಡಿರುವ ರಷ್ಯಾ- ಭಾರತ ಬಾಂಧವ್ಯದಿಂದ ಎರಡೂ ದೇಶಗಳ ಅನಿವಾರ್ಯತೆಗಳು ಪರಸ್ಪರ ಪೂರ್ಣಗೊಂಡಿವೆ.

ಇಂಥದ್ದೇ ಒಂದು ಶಾಶ್ವತ ಸಂಬಂಧವನ್ನು ಭಾರತ ದೊಂದಿಗೆ ಸ್ಥಾಪಿಸಲು ಅಮೆರಿಕ ಪ್ರಯ ತ್ನಿಸುತ್ತಿದೆ. ಆ ನಿಟ್ಟಿನಲ್ಲಿ, ಚರ್ಚೆಗಳು ಮುಂದುವರಿದಿವೆ” ಎಂದು ಅವರು ಹೇಳಿದ್ದಾರೆ.

ಭಾರತವು ತನ್ನ ಆವಶ್ಯಕತೆಗನುಗುಣವಾಗಿ ರಷ್ಯಾದೊಂದಿಗೆ ಅತ್ಯುತ್ತಮ ವಾಣಿಜ್ಯ ಸಂಬಂಧವನ್ನು ದಶಕಗಳ ಹಿಂದಿನಿಂದಲೂ ಕಾಪಾಡಿಕೊಂಡು ಬಂದಿದೆ.

ಅಂಥದ್ದೊಂದು ಗಟ್ಟಿಯಾದ ವಾಣಿಜ್ಯ ನಂಟನ್ನು ಈ ಹಿಂದೆ ಸ್ಥಾಪಿಸಲು ಅಮೆರಿಕದಿಂದ ಸಾಧ್ಯವಾಗಿಲ್ಲ ಎಂದು ಅಮೆರಿಕದ ಗೃಹ ಸಚಿವ ಅಂತೋನಿ ಬ್ಲಿಂಕನ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...