Thursday, December 11, 2025
Thursday, December 11, 2025

ಪ್ರೊ.ಬಿ.ತಿಪ್ಪೆಸ್ವಾಮಿ ಅವರಿಗೆ ವಿಜಿಎಸ್ ಟಿ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

Date:

ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿಜಿಎಸ್‌ಟಿ) ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಜವಾಹರ್‌ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಜಾಗತಿಕ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಮಾತನಾಡಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಪಠ್ಯಾಧಾರಿತ ಪಾಠ ಪ್ರವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾಗುವಂತಹ ಅನ್ವಯಿಕ ಸಂಶೋಧನೆಗಳನ್ನು ಕೈಗೊಳ್ಳಬೇಕು. ಇಂಥಹಾ ಸಮಾಜಮುಖಿ ಸಂಶೋಧನೆ ಕೈಗೊಂಡಿರುವ ಪ್ರಶಸ್ತಿ ವಿಜೇತರು ಅಭಿನಂದನಾರ್ಹರು ಎಂದರು.

ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ರಾಮಸಾಗರ ಗ್ರಾಮದ ಗುಂಡ ಬಸಯ್ಯ ಮತ್ತು ಪಾಪಮ್ಮ ಅವರ ಪುತ್ರರಾದ ಪ್ರೊ. ಬಿ. ತಿಪ್ಪೇಸ್ವಾಮಿ ಈ ಹಿಂದೆ ಯುಜಿಸಿ ನೀಡುವ ಸರ್ ಸಿ. ವಿ. ರಾಮನ್ ಪೋಸ್ಟ್ ಡಾಕ್ಟರಲ್ ಫೆಲೋಷಿಪ್ ಪಡೆದು ಅಮೆರಿಕಾದ ನಾರ್ಥ್ ಕೆರೊಲಿನಾ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ಸಂಶೋಧನೆ ಕೈಗೊಂಡಿದ್ದಾರೆ.

ಕಳೆದ 16 ವರ್ಷಗಳಿಂದ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಸ್ವಾಮಿ ಅವರ ಸಾಧನೆ ಇತರ ಅಧ್ಯಾಪಕರಿಗೆ ಮಾದರಿಯಾಗಲಿ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ...

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ...

ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕನ ಸಾವು

ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ...