Monday, July 27, 2026
Monday, July 27, 2026

ಪ್ರೊ.ಬಿ.ತಿಪ್ಪೆಸ್ವಾಮಿ ಅವರಿಗೆ ವಿಜಿಎಸ್ ಟಿ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

Date:

ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿಜಿಎಸ್‌ಟಿ) ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಜವಾಹರ್‌ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಜಾಗತಿಕ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಮಾತನಾಡಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಪಠ್ಯಾಧಾರಿತ ಪಾಠ ಪ್ರವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾಗುವಂತಹ ಅನ್ವಯಿಕ ಸಂಶೋಧನೆಗಳನ್ನು ಕೈಗೊಳ್ಳಬೇಕು. ಇಂಥಹಾ ಸಮಾಜಮುಖಿ ಸಂಶೋಧನೆ ಕೈಗೊಂಡಿರುವ ಪ್ರಶಸ್ತಿ ವಿಜೇತರು ಅಭಿನಂದನಾರ್ಹರು ಎಂದರು.

ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ರಾಮಸಾಗರ ಗ್ರಾಮದ ಗುಂಡ ಬಸಯ್ಯ ಮತ್ತು ಪಾಪಮ್ಮ ಅವರ ಪುತ್ರರಾದ ಪ್ರೊ. ಬಿ. ತಿಪ್ಪೇಸ್ವಾಮಿ ಈ ಹಿಂದೆ ಯುಜಿಸಿ ನೀಡುವ ಸರ್ ಸಿ. ವಿ. ರಾಮನ್ ಪೋಸ್ಟ್ ಡಾಕ್ಟರಲ್ ಫೆಲೋಷಿಪ್ ಪಡೆದು ಅಮೆರಿಕಾದ ನಾರ್ಥ್ ಕೆರೊಲಿನಾ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ಸಂಶೋಧನೆ ಕೈಗೊಂಡಿದ್ದಾರೆ.

ಕಳೆದ 16 ವರ್ಷಗಳಿಂದ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಸ್ವಾಮಿ ಅವರ ಸಾಧನೆ ಇತರ ಅಧ್ಯಾಪಕರಿಗೆ ಮಾದರಿಯಾಗಲಿ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...