Thursday, July 9, 2026
Thursday, July 9, 2026

ಉಕ್ರೇನ್ ಬಿಕ್ಕಟ್ಟು ಪರಿಹರಿಸಬೇಕೆ?ಅದಕ್ಕೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ

Date:

ಉಕ್ರೇನ್ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ನಿಜಕ್ಕೂ ಆಸಕ್ತಿಯಿದ್ದರೆ ಮೊದಲು ಉಕ್ರೇನ್ ಗೆ ಶಸ್ತ್ರಾಸ್ತ್ರ ಪೂರೈಸುವುದನ್ನು ನಿಲ್ಲಿಸಿ ಎಂದು ರಷ್ಯಾದ ವಿದೇಶ ಸಚಿವರು ಅಮೆರಿಕ ಮತ್ತು ನೇಟೊ ದೇಶಗಳನ್ನು ಆಗ್ರಹಿಸಿದ್ದಾರೆ.

ಉಕ್ರೇನ್ ನಲ್ಲಿ ಬಿಕ್ಕಟ್ಟಿಗೆ ಪರಿಹಾರ ಹುಡುಕುವ ಆಸಕ್ತಿಯಿದ್ದರೆ ಅಮೆರಿಕ ಮತ್ತು ನೇಟೊ ದೇಶಗಳು ಉಕ್ರೇನ್ ಗೆ ಶಸ್ತ್ರಾಸ್ತ್ರ ಪೂರೈಸುವುದನ್ನು ಮೊದಲು ನಿಲ್ಲಿಸಬೇಕು ಎಂದು ಚೀನಾದ ಸರಕಾರಿ ಸ್ವಾಮ್ಯದ ಸುದ್ಧಿಸಂಸ್ಥೆ ಕ್ಸಿನ್ಹುವಾಗೆ ನೀಡಿದ ಸಂದರ್ಶನದಲ್ಲಿ ರಷ್ಯಾ ದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಹೇಳಿದ್ದಾರೆ.

ಉಕ್ರೇನ್ ನಲ್ಲಿ ನಡೆಸಲಾಗುತ್ತಿರುವ ವಿಶೇಷ ಕಾರ್ಯಾಚರಣೆ ಯೋಜಿಸಿದ ರೀತಿಯಲ್ಲಿಯೇ ಮುಂದುವರಿಯುತ್ತಿದೆ.

ತನ್ನ ವಿರುದ್ಧದ ನಿರ್ಬಂಧ ಹಾಗೂ ಉಕ್ರೇನ್ ಗೆ ಶಸ್ತ್ರಾಸ್ತ್ರ ರವಾನೆ ಉಭಯ ದೇಶಗಳ ನಡುವಿನ ಸಂಧಾನ ಮಾತುಕತೆಗೆ ತೊಡಕಾಗಿದೆ. ಸಂಧಾನ ಮಾತುಕತೆ ಮುಂದುವರಿಯಲಿದೆ. ಆದರೆ ಪ್ರಗತಿ ಸಾಧಿಸುವುದು ಕಷ್ಟವಾಗಬಹುದು ಎಂದು ಲಾವ್ರೋವ್ ಹೇಳಿದರು.

ಇದರ ನಡುವೆ ಪೋಲ್ಯಾಂಡಿನ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ, ಯಾವುದೇ ಒಪ್ಪಂದಕ್ಕೆ ಬಾರದೆ ಸಂಧಾನ ಮಾತುಕತೆ ಅಂತ್ಯವಾಗುವ ಅಪಾಯವಿದೆ ಎಂದರು.

ಉಕ್ರೇನ್ ಗೆ ಶಸ್ತ್ರಸ್ತ್ರ ಪೂರೈಸುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ ಎಂದು ರಷ್ಯಾ ಎಚ್ಚರಿಕೆ ನೀಡಿದೆ.

ಅಮೆರಿಕ ಹಾಗೂ ಯುರೋಪ್ನ ಹಲವು ದೇಶಗಳು ಉಕ್ರೇನ್ ಗೆಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಒದಗಿಸುತ್ತಿವೆ. ಉಕ್ರೇನ್ ಗೆ33 ಬಿಲಿಯನ್ ಡಾಲರ್ ನೆರವು ಒದಗಿಸುವ ನಿರ್ಣಯಕ್ಕೆ ಅನುಮೋದನೆ ನೀಡುವಂತೆ ಅಮೆರಿಕದ ಅಧ್ಯಕ್ಷ ಬೈಡನ್ ಸಂಸತ್ತನ್ನು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...