ಕೆ.ಎಸ್.ಆರ್.ಟಿ.ಸಿ. ಇತಿಹಾಸದಲ್ಲಿಯೇ ಮೊದಲ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಅವರು ಹೇಳಿದ್ದಾರೆ.
ಕೆ.ಎಸ್.ಆರ್.ಟಿ.ಸಿ. ನಿಗಮದ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 10 ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರು ಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಿಗಮದ ಎಲ್ಲಾ ಸಿಬ್ಬಂದಿಗಳು 35,000, ಅದರಲ್ಲಿ ಒಟ್ಟು 8414 ಶಿಸ್ತು ಪ್ರಕರಣಗಳಿದೆ. ಕಳೆದ 3 ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತ ದಂಡ ಅಂದರೆ, ರೂ. 100, ರೂ. 200, ಗರಿಷ್ಠ ರೂ. 500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಂಡಿರುವ ನೌಕರರಿಗೆ ಆದೇಶದ ಪ್ರತಿಯನ್ನು ಸಿಹಿಯೊಂದಿಗೆ ವಿತರಿಸಿ ಶುಭ ಕೋರಿದರು.
