Friday, May 22, 2026
Friday, May 22, 2026

ಸಾರಿಗೆ ಸಂಸ್ಥೆಯ ನೌಕರರ ಪ್ರಕರಣಗಳ ಮನ್ನಾ ಸರ್ಕಾರದ ಸ್ತುತ್ಯರ್ಹ ಕ್ರಮ

Date:

ಕೆ.ಎಸ್.ಆರ್.ಟಿ.ಸಿ. ಇತಿಹಾಸದಲ್ಲಿಯೇ ಮೊದಲ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಅವರು ಹೇಳಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ನಿಗಮದ‌ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 10 ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರು ಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ನಿಗಮದ ಎಲ್ಲಾ ಸಿಬ್ಬಂದಿಗಳು 35,000, ಅದರಲ್ಲಿ ಒಟ್ಟು 8414 ಶಿಸ್ತು ಪ್ರಕರಣಗಳಿದೆ. ಕಳೆದ‌ 3 ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತ ದಂಡ ಅಂದರೆ, ರೂ. 100, ರೂ. 200, ಗರಿಷ್ಠ ರೂ. 500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಂಡಿರುವ ನೌಕರರಿಗೆ ಆದೇಶ‌ದ‌ ಪ್ರತಿಯನ್ನು ಸಿಹಿಯೊಂದಿಗೆ ವಿತರಿಸಿ ಶುಭ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...