Friday, May 22, 2026
Friday, May 22, 2026

ಮತ್ತೆ ಮಳೆರಾಯ ಸುರಿಯಲಿದ್ದಾನೆ- ಡಾ. ಶ್ರೀನಿವಾಸ್

Date:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದಾಗಿ ನಿನ್ನೆ ಭಾನುವಾರ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರಿನಲ್ಲಿ 50 ಮಿಮೀ, ಚಾಮರಾಜನಗರದಲ್ಲಿ 27 ಮಿಮೀ ಮಳೆಯಾಗಿದೆ.

ಮೇ 5ರ ಬಳಿಕ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ,ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿ ಅವರು ಮಾತನಾಡಿ, ಮೇಲ್ಮೈ ಸುಳಿಗಾಳಿ, ವಿದರ್ಭದಿಂದ ಕರ್ನಾಟಕದವರೆಗೆ ಮೋಡ ಕವಿದ ವಾತಾವರಣ ಮತ್ತು ತಾಪಮಾನ ಹೆಚ್ಚಳದಿಂದ ರಾಜ್ಯದಲ್ಲಿ ಮಳೆ ಬೀಳುತ್ತಿದೆ. ಮುಂದಿನ 72 ಗಂಟೆ ಸಾಧಾರಣ ಮಳೆಯಾದರೆ ಮೇ 5ರಿಂದ ಕರಾವಳಿ ಮತ್ತು ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಆಗಲಿದೆ. ಮಳೆ ಬಿದ್ದರೆ ತಾಪಮಾನ ತುಸು ಕಡಿಮೆಯಾಗುತ್ತದೆ. ಆದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...