Tuesday, December 9, 2025
Tuesday, December 9, 2025

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಗ್ರಾಹಕ ಸ್ನೇಹೀ ಕ್ರಮ

Date:

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಅಡುಗೆ ಎಣ್ಣೆ ಆಮದಿನ ಮೇಲಿನ ಸೆಸ್ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭಾರತವು ತನ್ನ ಅರ್ಧದಷ್ಟು ತೈಲವನ್ನು ಇಂಡೋನೇಷ್ಯಾದಿಂದ ಆಮದು ಮಾಡಿಕೊಂಡಿತು.
ಇಂಡೋನೇಷ್ಯಾವು ಇದ್ದಕ್ಕಿದ್ದಂತೆ ತಾಳೆ ಎಣ್ಣೆ ಹಾಗೂ ಕಚ್ಚಾ ತಾಳೆ ಎಣ್ಣೆಯ ರಫ್ತನ್ನು ನಿಷೇಧಿಸಿದೆ. ಇದು ಭಾರತದಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಪೂರೈಕೆಯಲ್ಲಿನ ಕುಸಿತದಿಂದಾಗಿ, ಬೆಲೆ ವೇಗವಾಗಿ ಏರುತ್ತಿದೆ.ಈ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯವು ಖಾದ್ಯ ತೈಲ ಆಮದಿನ ಮೇಲಿನ ಕೃಷಿ ಸೆಸ್ ಅನ್ನು ಶೇ.5 ರಷ್ಟು ಕಡಿಮೆ ಮಾಡಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಅಂತರಾಷ್ಟ್ರೀಯ ತೈಲ ಬೆಲೆಗಳು ಏರುತ್ತಿರುವುದು ಗ್ರಾಹಕರು ಮತ್ತು ದೇಶದ ಆಡಳಿತಗಾರರನ್ನ ಘಾಸಿಗೊಳಿಸಿದೆ ಎಂದು ಎಸ್ಇಎ ಹೇಳಿದೆ.

ಇನ್ನು ಈ ಹೊರೆಯನ್ನ ಕಡಿಮೆ ಮಾಡಲು ಸರ್ಕಾರವು ಸಂಸ್ಕರಿಸಿದ, ಕಚ್ಚಾ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನ ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಅಡುಗೆ ಎಣ್ಣೆ ಬೆಲೆಯಲ್ಲಿ ಶೀಘ್ರವೇ ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...