Friday, May 22, 2026
Friday, May 22, 2026

ರಾಜಕೀಯ ಪಕ್ಷ ಕಟ್ಟಿ ಅದೃಷ್ಟ ಪರೀಕ್ಷಿಸಲಿರುವ ಚಾಣಕ್ಯ: ಕಿಶೋರ್

Date:

ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಇಂದು ಸೋಮವಾರ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂದು ಸುಳಿವು ಕೊಟ್ಟಿದ್ದಾರೆ. ಪ್ರಶಾಂತ್ ಕಿಶೋರ್ ಅವರು ತಮ್ಮ ರಾಜ್ಯ ಬಿಹಾರದಿಂದ ಪ್ರಾರಂಭಿಸಿ ಜನತಾ ನ್ಯಾಯಾಲಯಕ್ಕೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರುವಂತೆ ಎಐಸಿಸಿ ಆಹ್ವಾನ ನೀಡಿತ್ತು. ಆ ಆಹ್ವಾನವನ್ನು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ತಿರಸ್ಕರಿಸಿದ್ದರು.
ನಂತರ ಅವರು ಮುಂದೆ ಏನು ಮಾಡಲಿದ್ದಾರೆ ಎಂಬ ತೀವ್ರ ಕುತೂಹಲ ಕೂಡ ಎಲ್ಲರಲ್ಲೂ ಮೂಡಿತ್ತು. ಆದರೆ ಈಗ ಆ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ಪ್ರಶಾಂತ್ ಕಿಶೋರ್ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿ, ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಿಷಯದ ಬಗ್ಗೆ ಟ್ವೀಟ್ ಮಾಡಿದ ಪ್ರಶಾಂತ್ ಕಿಶೋರ್ ಅವರು, ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಭಾಗಿದಾರನಾಗಲು, ಹಾಗೂ ಜನಪರ ನೀತಿಯನ್ನು ರೂಪಿಸಲು ಸಹಾಯ ಮಾಡುವ ನನ್ನ ಅನ್ವೇಷಣೆಯು 10 ವರ್ಷಗಳ ರೋಲರ್ಕೋಸ್ಟರ್ ಸವಾರಿಗೆ ಕಾರಣವಾಯಿತು. ನಾನು ಪುಟವನ್ನು ತಿರುಗಿಸುತ್ತಿದ್ದಂತೆ, ಸಮಸ್ಯೆಗಳನ್ನು ಮತ್ತು ಜನರ ಉತ್ತಮ ಆಡಳಿತದ ಹಾದಿಯನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ನಿಜವಾದ ಗುರುಗಳು, ಜನರ ಬಳಿಗೆ ಹೋಗುವ ಸಮಯ ಬಂದಿದೆ ಎಂದು ಪ್ರಶಾಂತ್ ಕಿಶೋರ್ ಅವರು ಹೇಳಿದ್ದಾರೆ.
ಈ ಮೂಲಕ ತಾವು ಹೊಸ ರಾಜಕೀಯ ಪಕ್ಷ ಸ್ಥಾಪನೆಯ ಸುಳಿವು ಸಹಾ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...