Sunday, December 7, 2025
Sunday, December 7, 2025

ಸ್ವಂತ ಗೃಹಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಅಭಿಮಾನಿ ಗೌ.ಹಾಲೇಶ್

Date:

ಅಭಿಮಾನಿ ಬಳಗ, ಸಂಘಗಳನ್ನು ಹೆಸರಾಂತ ವ್ಯಕ್ತಿಗಳ ಹೆಸರಲ್ಲಿ ಕಟ್ಟಿ ಕೊಂಡಿರುವುದನ್ನು ಸಾಮಾನ್ಯವಾಗಿ ನಾವು ಆದರೆ ಇಲ್ಲೊಬ್ಬ ತನ್ನ ಮನೆಗೆ ಮೋದಿ ಅವರ ಹೆಸರಿಟ್ಟು ತನ್ನ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ.

ಚನ್ನಗಿರಿಯ ನಿವಾಸಿ ಗೌಡ್ರ ಹಾಲೇಶ್ ಕಟ್ಟಿಸಿದ ಹೊಸ ಮನೆಗೆ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಇಟ್ಟು ನಾಮಕರಣ ಮಾಡಿ ತಾಲ್ಲೂಕಿನ ಜನರ ಗಮನ ಸೆಳೆದಿದ್ದಾರೆ. ಹಾಲೇಶ್ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದಾರೆ. ಅನೇಕ ವರ್ಷಗಳಿಂದ ಬಿಜೆಪಿಗಾಗಿ ದುಡಿಯುತ್ತಿದ್ದಾರೆ. ಇವರು ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿಯ ತೋಟದಲ್ಲಿ ಹೊಸ ಮನೆ ಕಟ್ಟಲು ತೀರ್ಮಾನಿಸಿದರು. ಅದರಂತೆ 42 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ನೂತನ ಮನೆಯೊಂದನ್ನು ನಿರ್ಮಿಸಿದ್ದಾರೆ.

ಹೊಸ ಮನೆ ಕಟ್ಟಿದ ಮೇಲೆ ಆ ಮನೆಗೆ ಯಾವುದಾದರೂ ಹೆಸರನ್ನು ನಾಮಕರಣ ಮಾಡುವುದು ಸಂಪ್ರದಾಯ. ಸಾಮಾನ್ಯವಾಗಿ ನಾವು ನಿರ್ಮಿಸಿದ ಹೊಸ ಮನೆಗೆ ಮನೆ ದೇವರು, ಮಕ್ಕಳು ಅಥವಾ ತಂದೆ ತಾಯಿಗಳ ಹೆಸರನ್ನು ನಾಮಕರಣ ಮಾಡುತ್ತಾರೆ. ಆದರೆ ಈತ ನರೇಂದ್ರ ಮೋದಿಯವರ ಅಭಿಮಾನಿಯಾದ ಇವರು ತಾವು ಕಟ್ಟಿಸಿದ ಹೊಸ ಮನೆಗೆ ಶ್ರೀ ನರೇಂದ್ರ ಮೋದಿ ನಿಲಯ ಎಂಬ ಹೆಸರು ಇಟ್ಟಿದ್ದಾರೆ.

ನರೇಂದ್ರ ಮೋದಿ ನಿಲಯದ ಉದ್ಘಾಟನೆಯನ್ನು ಮೇ. 3ರಂದು ಬಸವ ಜಯಂತಿಯ ದಿನ ಉದ್ಘಾಟಿಸಲು ತೀರ್ಮಾನಿಸಿದ್ದಾರೆ. ಈಗ ನರೇಂದ್ರ ಮೋದಿ ನಿಲಯವನ್ನು ನೋಡಲು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಜನರು ಬರುತ್ತಿದ್ದಾರೆ. ಈ
ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಅವರ ಅಭಿಮಾನಿಗಳಿಗೆ ಮಾತ್ರ ಆಹ್ವಾನವಿದೆ.

ನರೇಂದ್ರ ಮೋದಿಯವರು ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದ ದಿನದಿಂದಲೂ ಅವರನ್ನು ಗಮನಿಸುತ್ತಾ ಬಂದಿದ್ದೆ. ಅವರು ಪ್ರಧಾನಿಯಾದ ಮೇಲೆ ಇನ್ನಷ್ಟು ಪ್ರೀತಿ ಬೆಳೆಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ಧುಗೊಳಿಸಲು ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಕೊರೊನಾವನ್ನು ಹಿಮ್ಮೆಟ್ಟಿಸಲು ದೇಶದ ಜನರಿಗೆ ಉಚಿತ ಲಸಿಕೆ ನೀಡಿ ದೇಶದ ಒಳಿತಿಗಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಇಡೀ ವಿಶ್ವವೇ ಗಮನಸೆಳೆಯುವಂತೆ ಮಾಡಿದ್ದಾರೆ. ಇದರಿಂದ ಅವರು ತುಂಬ ಇಷ್ಟ. ಆದ್ದರಿಂದ ನರೇಂದ್ರ ಮೋದಿ ಹೆಸರನ್ನು ಇಟ್ಟಿದ್ದೇನೆ. ನರೇಂದ್ರ ಮೋದಿ ಅಭಿಮಾನಿಗಳಿಗೆ ಮಾತ್ರ ಗೃಹ ಪ್ರವೇಶಕ್ಕೆ ಆಹ್ವಾನ ನೀಡಿದ್ದೇನೆ ಎಂದು ಗೌ. ಹಾಲೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...