Friday, May 22, 2026
Friday, May 22, 2026

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಯಿರಿಸಿದೆ -ಬೊಮ್ಮಾಯಿ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮತ್ತು ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ನಿನ್ನೆ ಭಾನುವಾರದಂದು ಸಹಿ ಹಾಕಲಾಯಿತು.

7 ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ ಒದಗಿಸುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ ಮತ್ತು ಐ.ಎಸ್.ಎಂ.ಇ ಪರವಾಗಿ ನಿರ್ದೇಶಕ ಅಜಯ್ ಜಲನ್ ಸಹಿ ಹಾಕಿದರು.

ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಐ.ಎಸ್.ಎಂ.ಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ವೇಳೆಯಲ್ಲಿಯೇ ಈ ಮಹತ್ವದ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ.

ಕೇವಲ ಆರ್ಥಿಕ ಪ್ರೋತ್ಸಾಹಕಗಳು ಮಾತ್ರವಲ್ಲದೆ, ಒಟ್ಟಾರೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಕರ್ನಾಟಕ ಸರ್ಕಾರ ಅರಿತಿದೆ.
ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಹೊಂದಿದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಇದೊಂದು ಬಹುದೊಡ್ಡ ಹೆಜ್ಜೆ. ಸವಾಲುಗಳು ಸಹ ದೊಡ್ಡಮಟ್ಟದಲ್ಲಿ ಇವೆ. ಈ ಸವಾಲುಗಳನ್ನು ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಲೂ ಈ ಒಪ್ಪಂದ ಅವಕಾಶವನ್ನು ಕಲ್ಪಿಸಿದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...