Monday, August 24, 2026
Monday, August 24, 2026

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದೆ-ಸುಧಾಕರ್

Date:

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದೆ. ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಹೇಳಿದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ನಿನ್ನೆ ಸೋಮವಾರ ಏರ್ಪಡಿಸಲಾಗಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೋನಾ ಸಮಯದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ನರ್ಸಿಂಗ್ ಕಾಲೇಜು ತೆರೆಯಬೇಕೆಂಬ ನೂತನ ನೀತಿ ರೂಪಿಸಲಾದನ್ವಯ ಶಿವಮೊಗ್ಗದಲ್ಲಿ ಕಾಲೇಜು ಉದ್ಘಾಟನೆಗೊಂಡು 100 ನರ್ಸಿಂಗ್ ವಿದ್ಯಾರ್ಥಿಗಳ ದಾಖಲಾತಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ.

ಅನೇಕ ಸಮಸ್ಯೆಗಳಿಗೆ ಉಪಯುಕ್ತವಾದ 128 ಸ್ಲೈಸ್ ಸಿಟಿ ಯಂತ್ರ ಉದ್ಘಾಟನೆಗೊಂಡಿದೆ.ಕೊರೋನಾ 2ನೇ ಅಲೆಯಲ್ಲಿ ಆಮ್ಲಜನಕ ಕೊರತೆ ಅತೀವವಾಗಿ ಕಾಡಿದೆ. ಅಂತಹ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ಆಮ್ಲಜನಕ ಸ್ಟೋರೇಜ್ ಟ್ಯಾಂಕ್ಸ್‍ನ್ನು ದ್ವಿಗುಣಗೊಳಿಸಲಾಗಿದೆ.

ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಕೆ ಆಗಿರುವುದು ಒಂದು ದಾಖಲೆ ಆಗಿದೆ. ಲಿಕ್ವಿಡ್ ಆಕ್ಸಿಜನ್ ಫಿಲ್ಲಿಂಗ್ ಸ್ಟೇಷನ್ ಶಿವಮೊಗ್ಗದ ವಿಶೇಷ. ಶಿವಮೊಗ್ಗದ ಸಂಸ್ಥೆಗೆ 130 ಐಸಿಯು ಬೆಡ್, 108 ಹೆಚ್‍ಡಿಡಿ ಮತ್ತು 120 ವೆಂಟಿಲೇಟರ್ ನೀಡಲಾಗಿದೆ. ಎನ್‍ಐಸಿಯು ಘಟಕ, ಸ್ಕಿಲ್ ಲ್ಯಾಲ್ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳ ಹಿಂದೆ ಬದ್ದತೆಯುಳ್ಳ ನಾಯಕರಿದ್ದಾರೆ ಎಂದು ಹೇಳಿದರು.

50 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉಚಿತವಾಗಿ ಆರೋಗ್ಯ ವಿಮೆ ನೀಡಿದ ಏಕೈಕ ದೇಶ ನಮ್ಮದು. ಪ್ರಾಥಮಿಕ ಮತ್ತು ದ್ವಿತೀಯ ಹಂತದ ಚಿಕಿತ್ಸೆಗಳು ಇತರೆ ಆಸ್ಪತ್ರೆಗಳಲ್ಲಿ ದೊರೆತರೆ ತೃತೀಯ ಹಂತದ ಚಿಕಿತ್ಸೆ ವೈದ್ಯಕೀಯ ಕಾಲೇಜುಗಳಿರುವೆಡೆ ಲಭಿಸುತ್ತದೆ. ಗುಣಮಟ್ಟದ ಸೇವೆ ನೀಡದಿದ್ದಲ್ಲಿ ಜನರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ಸುಧಾಕರ್ ಅವರು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳು ಸಂಜೀವಿನಿ ಆಗಿ ಸೇವೆ ಸಲ್ಲಿಸಬೇಕು. ಉತ್ಕøಷ್ಟ ಚಿಕಿತ್ಸೆ ಸರ್ಕಾರದ ಕಾಯಕಲ್ಪವಾಗಿದೆ. ಜನರು ಉಪಕಾರ ಸ್ಮರಣೆ ಮಾಡುವ ರೀತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಕೆಲಸ ಮಾಡಬೇಕು ಎಂದು ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದರು.

ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಡವರ ಆರೋಗ್ಯ ರಕ್ಷಣೆಯ ಕನಸು ನನಸಾಗಬೇಕು. ಮೆಡಿಕಲ್ ಕಾಲೇಜು ಮತ್ತಷ್ಟು ಬೆಳೆಯಬೇಕು. ಪ್ರಸ್ತುತ ನೀಡಿರುವ ಸೌಲಭ್ಯಗಳ ಉಪಯೋಗದ ಆತ್ಮಾವಲೋಕನ ಮಾಡಿಕೊಳ್ಳಬೇಕು. 133 ವೈದ್ಯಾಧಿಕಾರಿಗಳಿರುವ ಕಾಲೇಜಿನಲ್ಲಿ ಯಾರೂ ಚಿಕಿತ್ಸೆಯಿಂದ ಹೊರಗುಳಿಯದಂತೆ, ಜನರಿಗೆ ಹೆಚ್ಚು ಓಡಾಡಿಸದೆ ಸೇವೆ ನೀಡಬೇಕು. ಹೆಚ್ಚಿನ ಚಿಕಿತ್ಸೆಗೆ ಜನರು ಮಣಿಪಾಲಕ್ಕೆ ತೆರಳುತ್ತಿರುವುದು ಇಲ್ಲಿ ಹೆಚ್ಚಿನ ಸೌಲಭ್ಯವಿಲ್ಲವೆಂಬುದನ್ನು ತೋರುತ್ತದೆ. ಆದ್ದರಿಂದ ವೈದ್ಯಾಧಿಕಾರಿಗಳಿಂದ ಹಿಡಿದು ಸಿಬ್ಬಂದಿವರೆಗೆ ಕರ್ತವ್ಯಪರತೆಯಿಂದ ಕೆಲಸ ಮಾಡಿದರೆ ನಿಮ್ಮ ಗೌರವ ಸಹ ಹೆಚ್ಚುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದರು.

ಸಂಸದರಾದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಉದ್ಘಾಟನೆಯೊಂದಿಗೆ ರೂ.38.676 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ. 29.62 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿದೆ. ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದೆ. ಮೆಗ್ಗಾನ್ ಆವರಣದಲ್ಲಿ ಮುಂಭಾಗದಲ್ಲಿ ನಿರ್ಮಿಸುವುದಕ್ಕೆ ಯೋಜನೆ ತಯಾರಿಸಲಾಗುತ್ತಿದೆ. ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೇಲ್ಮಹಡಿಯಲ್ಲಿ ಸಹ ಕಾರ್ಯ ನಿರ್ವಹಿಸಿದಲ್ಲಿ ಸರ್ಕಾರಕ್ಕೆ ಹಣ ಸಹ ಉಳಿತಾಯವಾಗುತ್ತದೆ. ಕಿದ್ವಾಯಿಯಿಂದಲೇ ಕ್ಯಾನ್ಸರ್ ತಜ್ಞ ವೈದ್ಯರಿಂದ ಚಿಕಿತ್ಸೆ ವ್ಯವಸ್ಥೆ ಮಾಡಿದಲ್ಲಿ ಕ್ಯಾನ್ಸರ್ ಆಸ್ಪತ್ರೆ ಶೀಘ್ರವಾಗಿ ಉದ್ಘಾಟಿಸಲು ಅನುಕೂಲವಾಗುತ್ತದೆ. ಆಯುರ್ವೇದಿಕ್ ಆಸ್ಪತ್ರೆಯನ್ನೂ ಬೇಗ ಶುರು ಮಾಡಲು ಆರೋಗ್ಯ ಸಚಿವರ ಸಹಕಾರ ಬೇಕು. ನಗರಾಭಿವೃದ್ದಿ ಸಚಿವರು ಸಹ ಆಸ್ಪತ್ರೆ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕಾಗಿ ರೂ.10 ಕೋಟಿ ನೀಡಿದೆ. ಎಲ್ಲರೂ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸುತ್ತಿದ್ದಾರೆ ಎಂದು ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಶಾಸಕರು ಮತ್ತು ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶಿವಮೊಗ್ಗ ನಮ್ಮ ನಿರೀಕ್ಷೆ ಮೀರಿ ಒಳ್ಳೆಯ ರೀತಿಯಲ್ಲಿ ಬೆಳೆಯುತ್ತಿದೆ. ಇನ್ನು ಆರೇಳು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದೆ. ನಮ್ಮ ಪ್ರಧಾನಿ ಮೋದಿಯವರನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದಲ್ಲೇ ಕರೆತಂದು ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ. ನಾನು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಜೂರಾದ ಶಿವಮೊಗ್ಗ ಮೆಡಿಕಲ್ ಕಾಲೇಜು ಇಂದು ರಾಜ್ಯದಲ್ಲೇ ಟಾಪ್ ಕಾಲೇಜಾಗಿದೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಉತ್ತಮ ಸೇವೆ ನೀಡಿದೆ. ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಜನರು ಮಣಿಪಾಲಗೆ ಹೆಚ್ಚು ಹೋಗುತ್ತಿದ್ದರು. ಆದರೆ ಈಗ ಅದು ಶೇ.90 ಕಡಿಮೆ ಆಗಿದೆ. ಆ ರೀತಿಯ ವ್ಯವಸ್ಥೆಗಳು, ಸೌಲಭ್ಯ ಶಿವಮೊಗ್ಗದಲ್ಲೇ ದೊರಕುತ್ತಿದೆ. ಯಾವುದೇ ರೋಗಿಗೆ ಅಗತ್ಯವಾದ ಎಲ್ಲ ರೀತಿಯ ಚಿಕಿತ್ಸೆ ನೀಡುವ ಪ್ರಾಮಾಣಿಕ ಪ್ರಯತ್ನವನ್ನು ವೈದ್ಯರು ಸೇರಿದಂತೆ ಎಲ್ಲ ಸಿಬ್ಬಂದಿ ಮಾಡಬೇಕೆಂದು ಯಡಿಯೂರಪ್ಪ ಅವರು ಮನವಿ ಮಾಡಿದರು.

ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ ಅವರು ಮಾತನಾಡಿ, ನಮ್ಮ ಸರ್ಕಾರ ಅಭಿವೃದ್ದಿ ಮತ್ತು ಜನಪರ ಕೆಲಸಗಳನ್ನು ಮಾಡುತ್ತಿದೆ. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕಾಲೇಜಿಗೆ ಅಗತ್ಯವಾದ ಯುಜಿಡಿ ಸೇರಿದಂತೆ ಇತರೆ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರರಾದ ಸುನೀತ ಅಣ್ಣಪ್ಪ, ಜ್ಯೋತಿ ಪ್ರಕಾಶ್ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಾ.ರಾಜೇಶ್ ಸುರಗಿಹಳ್ಳಿ, ಡಾ.ಸಿದ್ದನಗೌಡ ಪಾಟಿಲ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...