Friday, May 22, 2026
Friday, May 22, 2026

ಹುಬ್ಬಳ್ಳಿ- ಬೆಂಗಳೂರು ನಡುವೆ ವೇಗದ ರೈಲು

Date:

ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಮುಂಬರುವ ದಿನಗಳಲ್ಲಿ ವಂದೇ ಭಾರತ ರೈಲು 160 ಕಿಮೀ ವೇಗದಲ್ಲಿ ಸಂಚರಿಸಲಿದೆ. ಆರಂಭದಲ್ಲಿ ಐದಾರು ನಿಲ್ದಾಣದಲ್ಲಿ ಮಾತ್ರ ನಿಲುಗಡೆ ಹೊಂದಲಿದೆ. ಶೀಘ್ರದಲ್ಲೇ ಹುಬ್ಬಳ್ಳಿ-ದಾವಣಗೆರೆಗೆ ಡೆಮೋ ರೈಲು ಸಂಚರಿಸಲಿದೆ ಎಂದು ಸಂಸದ ಶಿವಕುಮಾರ ಉದಾಸಿ ಅವರು ಹೇಳಿದರು.

ತಾಲೂಕಿನ ಕರಜಗಿ ಗ್ರಾಮದ ರೈಲ್ವೆ ನಿಲ್ದಾಣದ ಬಳಿ .21.13ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕಳೆದ ರೈಲ್ವೆ ಬಜೆಟ್‌ನಲ್ಲಿ 2.39 ಲಕ್ಷ ಕೋಟಿ ವ್ಯಯಿಸಲಾಗುತ್ತಿದೆ. ನೈಋುತ್ಯ ರೈಲ್ವೆ ವಿಭಾಗಕ್ಕೆ .6,900 ಕೋಟಿ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 43 ಹೆಚ್ಚುವರಿಯಾಗಿ ಕೊಡಲಾಗಿದೆ. ಮೂಲಭೂತ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ಕೊಟ್ಟಿದ್ದೇವೆ. ಹೊಸ ಲೈನ್‌, ಡಬ್ಲಿಂಗ್‌ಗೆ 2325 ಕೋಟಿ ಕೊಟ್ಟಿದ್ದೇವೆ. ರಸ್ತೆ ಹಾಗೂ ಹಳಿ ಸುರಕ್ಷತೆಗೆ 625 ಕೋಟಿ, ಸೇತುವೆ ನಿರ್ಮಾಣಕ್ಕೆ 254 ಕೋಟಿ ಅನುದಾನವನ್ನು ಕೇಂದ್ರ ಬಜೆಟ್‌ನಲ್ಲಿ ಕೊಡಲಾಗಿದೆ ಎಂದರು.

ಹಾವೇರಿ,ಸವಣೂರು 20 ಕಿಮಿ ರೈಲ್ವೆ ಡಬ್ಲಿಂಗ್‌ ಕಾಮಗಾರಿ ಪೂರ್ಣಗೊಂಡಿದೆ. ಕರಜಗಿ ಮತ್ತು ಹಾವೇರಿಯಲ್ಲಿ ಸ್ಟೇಷನ್‌ ಕಟ್ಟಡ ನಿರ್ಮಿಸಲಾಗುತ್ತಿದೆ. ಕರಜಗಿ, ಸವಣೂರಿನಲ್ಲಿ ಹೈ ಲೆವಲ್‌ ಪ್ಲಾಟ್‌ಫಾರಂ ಮಾಡುತ್ತಿದ್ದೇವೆ. ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು ಹೊಸ ರೈಲ್ವೆ ಮಾರ್ಗ ನಿರ್ಮಾಣಕ್ಕೆ ,50 ಕೋಟಿ ಕೇಂದ್ರ ಸರ್ಕಾರ ಅನುದಾನ ನೀಡಿದೆ. ರಾಣಿಬೆನ್ನೂರು ಪ್ಲಾಟ್‌ಫಾರಂನ ವಿಸ್ತರಣೆ ಕೆಲಸ ನಡೆದಿದೆ. ಗದಗ-ಯಲವಿಗಿ 55 ಕಿಮೀ ಉದ್ದದ ರೈಲು ಮಾರ್ಗ ಯೋಜನೆಗೆ ಭೂಸ್ವಾಧೀನಕ್ಕಾಗಿ ರಾಜ್ಯ ಸರ್ಕಾರ 125 ಕೋಟಿ ಮೀಸಲಿಟ್ಟಿದೆ ಎಂದು ತಿಳಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಮೋಟೆಬೆನ್ನೂರ, ರಾಣಿಬೆನ್ನೂರ ಬಳಿ ಕಾಮಗಾರಿ ಮಂದಗತಿಯಲ್ಲಿ ನಡೆಯತ್ತಿದೆ. ಗುಣಮಟ್ಟದೊಂದಿಗೆ ಶೀಘ್ರದಲ್ಲಿ ಯಾರು ಕಾಮಗಾರಿಯನ್ನು ಪೂರ್ಣಗೊಳಿಸುತ್ತಾರೋ ಅವರಿಗೆ ಟೆಂಡರ್‌ ಕೊಡಿ. ಸರಿಯಾಗಿ ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಸೂಚಿಸಿದರು.

ಕರಜಗಿ ಗ್ರಾಮದ ಬಳಿ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಬಹುಬೇಡಿಕೆ ಇತ್ತು. ಆದ್ದರಿಂದ,21.13ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲಾಗಿದೆ. ಪಾದಚಾರಿಗಳಿಗೆ ಅನುಕೂಲ ಕಲ್ಪಿಸಲು ಫುಟ್‌ಪಾತ್‌ ಸಹ ನಿರ್ಮಿಸಲಾಗಿದೆ. 2018ರಲ್ಲಿ ಆರಂಭವಾಗಿದ್ದ ಕಾಮಗಾರಿ ಕೋವಿಡ್‌ ಕಾರಣದಿಂದ ಒಂದು ವರ್ಷ ತಡವಾಗಿ ಮುಗಿದಿದೆ. ಈ ವರ್ಷದ ಬಜೆಟ್‌ನಲ್ಲಿ ನಮ್ಮ ಜಿಲ್ಲೆಯ 6 ರಸ್ತೆ ಕೆಳ ಸೇತುವೆ ಮತ್ತು ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಕೆಳ ಸೇತುವೆಗಳನ್ನು ಮೇಲ್ಸೇತುವೆಗಳಾಗಿ ಪರಿವರ್ತಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ. ನಾಗೇಂದ್ರಮಟ್ಟಿಯಲ್ಲಿ ಸೇತುವೆ ನಿರ್ಮಾಣದ ಬೇಡಿಕೆ ಇದೆ. ರೈಲ್ವೆ ಇಲಾಖೆಯ ಎಂಜಿನಿಯರ್‌ ಭೇಟಿ ನೀಡಿ ಪರಿಶೀಲಿಸಿ ಡಿಪಿಆರ್‌. ತಯಾರಿಸಲು ಸೂಚಿಸಲಾಗಿದೆ. ರಾಣೆಬೆನ್ನೂರ-ಗುತ್ತಲ ಮಾರ್ಗದಲ್ಲಿ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ನಡೆದಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...