Thursday, February 5, 2026
Thursday, February 5, 2026

ಆಕಾಶದೆತ್ತರ ಬೆಳೆದವರು ಪುನೀತ್- ಮುರುಘಾ ಶರಣರು

Date:

ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

ಬಸವ ಜಯಂತಿ ದಿನವಾದ ಇಂದು ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ.

ಡಾ.ಶಿವಮೂರ್ತಿ ಮುರುಘ ಶರಣರು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪರಿಣಿತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಕನ್ನಡ ಚಲನಚಿತ್ರ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಪುನೀತ್​ರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದರು.

ಈ ಸಂದರ್ಭದಲ್ಲಿ ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...